ಮೈಸೂರು

ಕೆಲಸದ ಅವಧಿ ಹೆಚ್ಚಳಕ್ಕೆ ಎಐಯುಟಿಯುಸಿ ವಿರೋಧ

ಮೈಸೂರು: ಕಾರ್ಖಾನೆಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ’ (AIUTUC) ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಸಮೀಪ ಜಮಾಯಿಸಿದ ಪ್ರತಿಭಟನಕಾರರು, ‘ಕಾಯ್ದೆ ತಿದ್ದುಪಡಿಯನ್ನು ಕೈ ಬಿಡಬೇಕು’ ಎಂದು ಆಗ್ರಹಿಸಿದರು.
ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯೆ ಉಮಾದೇವಿ ಮಾತನಾಡಿ, ‘ದುಡಿಮೆ ಅವಧಿಯನ್ನು 9 ಗಂಟೆಯಿಂದ 12 ಗಂಟೆಗೆ ಏರಿಸಲಾಗಿದೆ. ರಾತ್ರಿ ವೇಳೆ ಮಹಿಳಾ ಕಾರ್ಮಿಕರಿಗೆ ಇದ್ದ ನಿರ್ಬಂಧ ತೆಗೆದುಹಾಕಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘12 ಗಂಟೆ ಕೆಲಸ ಮಾಡಿಸಿದರೆ ಕಾರ್ಮಿಕನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚುವರಿ ಕೆಲಸಕ್ಕೂ ಒ.ಟಿ ಭತ್ಯೆ ಕೂಡ ಇಲ್ಲ. ದಿನಕ್ಕೆ 7 ಗಂಟೆಯಂತೆ ವಾರಕ್ಕೆ 5 ದಿನ ಕೆಲಸ ಅವಧಿ ನಿಗದಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ದುಡಿಯುವ ಸ್ಥಳಗಳಲ್ಲಿ ಮಹಿಳಾ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ. ರಾತ್ರಿ ವೇಳೆ ಕೆಲಸದ ನಿರ್ಬಂಧ ತೆಗೆದುಹಾಕಿದರೆ ಶೋಷಣೆ ಇನ್ನಷ್ಟು ಹೆಚ್ಚಾಗಲಿದೆ. ಮಕ್ಕಳ ಲಾಲನೆ–ಪಾಲನೆ ಮಾಡುವ ಜವಾಬ್ದಾರಿ ನಿರ್ವಹಿಸುತ್ತಿರುವ ಮಹಿಳೆಯ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ. ಆರೋಗ್ಯದ ಮೇಲೂ ಪರಿಣಾಮ ಬೀರುವುದರಿಂದ ತಿದ್ದುಪಡಿ ಕೈಬಿಡಬೇಕು’ ಎಂದರು.

ಎಐಟಿಯುಸಿ ಮುಖಂಡ ‌ಎನ್‌.ಕೆ.ದೇವದಾಸ್‌ ಮಾತನಾಡಿ, ‘ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ 8 ಗಂಟೆ ಕೆಲಸ, 8 ಗಂಟೆ ವಿರಾಮ, 8 ಗಂಟೆ ಮನರಂಜನೆ ಆಶಯಕ್ಕೆ ಹೊಸ ನೀತಿಯು ವಿರುದ್ಧವಾಗಿದೆ. ಮಾನವ ವಿರೋಧಿ ಕಾಯ್ದೆ ವಾಪಸ್‌ ಪಡೆಯಬೇಕು’ ಎಂದು ಒತ್ತಾಯಿಸಿದರು.

‘ಯಾವುದೇ ಕಾಯ್ದೆ ತಿದ್ದುಪಡಿ ಮಾಡುವಾಗಲೂ ತಜ್ಞರ ಸಮಿತಿ ರಚಿಸಿ ಸಲಹೆ ಪಡೆಯಬೇಕು. ಕಾರ್ಮಿಕರಿಗೆ ಸಂಬಂಧಿಸಿದ ವಿಚಾರವಾಗಿದ್ದರೂ ಮುಖಂಡರ ಅಭಿಪ್ರಾಯ ಪಡೆಯದೇ ಏಕಾಏಕಿ ತಿದ್ದುಪಡಿ ಮಾಡುವ ಮೂಲಕ ಪ್ರಜಾಸತ್ತಾತ್ಮಕ ನೀತಿಗಳಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಂಡಿದೆ. ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡಿದೆ’ ಎಂದು ಕಿಡಿಕಾರಿದರು.

ವಿವಿಧ ಸಂಘಟನೆಗಳ ಮುಖಂಡರಾದ ಬಾಲಾಜಿರಾವ್, ಎಚ್‌.ಆರ್‌.ಶೇಷಾದ್ರಿ, ಅನಿಲ್‌ಕುಮಾರ್‌ ನಾ.ದಿವಾಕರ್, ಜಯರಾಮ್‌, ಜಗನ್ನಾಥ್‌, ಜವರಯ್ಯ, ಅನಿಲ್‌ಕುಮಾರ್, ಮೆಹಬೂಬ್‌, ಲೋಕೇಶ್‌, ರಾಜು, ವೆಂಕಟೇಶ್ ಇದ್ದರು.

lokesh

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

6 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

9 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

9 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

10 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

10 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

10 hours ago