ಮೈಸೂರು

ಕೆಲಸದ ಅವಧಿ ಹೆಚ್ಚಳಕ್ಕೆ ಎಐಯುಟಿಯುಸಿ ವಿರೋಧ

ಮೈಸೂರು: ಕಾರ್ಖಾನೆಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ’ (AIUTUC) ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಸಮೀಪ ಜಮಾಯಿಸಿದ ಪ್ರತಿಭಟನಕಾರರು, ‘ಕಾಯ್ದೆ ತಿದ್ದುಪಡಿಯನ್ನು ಕೈ ಬಿಡಬೇಕು’ ಎಂದು ಆಗ್ರಹಿಸಿದರು.
ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯೆ ಉಮಾದೇವಿ ಮಾತನಾಡಿ, ‘ದುಡಿಮೆ ಅವಧಿಯನ್ನು 9 ಗಂಟೆಯಿಂದ 12 ಗಂಟೆಗೆ ಏರಿಸಲಾಗಿದೆ. ರಾತ್ರಿ ವೇಳೆ ಮಹಿಳಾ ಕಾರ್ಮಿಕರಿಗೆ ಇದ್ದ ನಿರ್ಬಂಧ ತೆಗೆದುಹಾಕಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘12 ಗಂಟೆ ಕೆಲಸ ಮಾಡಿಸಿದರೆ ಕಾರ್ಮಿಕನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚುವರಿ ಕೆಲಸಕ್ಕೂ ಒ.ಟಿ ಭತ್ಯೆ ಕೂಡ ಇಲ್ಲ. ದಿನಕ್ಕೆ 7 ಗಂಟೆಯಂತೆ ವಾರಕ್ಕೆ 5 ದಿನ ಕೆಲಸ ಅವಧಿ ನಿಗದಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ದುಡಿಯುವ ಸ್ಥಳಗಳಲ್ಲಿ ಮಹಿಳಾ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ. ರಾತ್ರಿ ವೇಳೆ ಕೆಲಸದ ನಿರ್ಬಂಧ ತೆಗೆದುಹಾಕಿದರೆ ಶೋಷಣೆ ಇನ್ನಷ್ಟು ಹೆಚ್ಚಾಗಲಿದೆ. ಮಕ್ಕಳ ಲಾಲನೆ–ಪಾಲನೆ ಮಾಡುವ ಜವಾಬ್ದಾರಿ ನಿರ್ವಹಿಸುತ್ತಿರುವ ಮಹಿಳೆಯ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ. ಆರೋಗ್ಯದ ಮೇಲೂ ಪರಿಣಾಮ ಬೀರುವುದರಿಂದ ತಿದ್ದುಪಡಿ ಕೈಬಿಡಬೇಕು’ ಎಂದರು.

ಎಐಟಿಯುಸಿ ಮುಖಂಡ ‌ಎನ್‌.ಕೆ.ದೇವದಾಸ್‌ ಮಾತನಾಡಿ, ‘ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ 8 ಗಂಟೆ ಕೆಲಸ, 8 ಗಂಟೆ ವಿರಾಮ, 8 ಗಂಟೆ ಮನರಂಜನೆ ಆಶಯಕ್ಕೆ ಹೊಸ ನೀತಿಯು ವಿರುದ್ಧವಾಗಿದೆ. ಮಾನವ ವಿರೋಧಿ ಕಾಯ್ದೆ ವಾಪಸ್‌ ಪಡೆಯಬೇಕು’ ಎಂದು ಒತ್ತಾಯಿಸಿದರು.

‘ಯಾವುದೇ ಕಾಯ್ದೆ ತಿದ್ದುಪಡಿ ಮಾಡುವಾಗಲೂ ತಜ್ಞರ ಸಮಿತಿ ರಚಿಸಿ ಸಲಹೆ ಪಡೆಯಬೇಕು. ಕಾರ್ಮಿಕರಿಗೆ ಸಂಬಂಧಿಸಿದ ವಿಚಾರವಾಗಿದ್ದರೂ ಮುಖಂಡರ ಅಭಿಪ್ರಾಯ ಪಡೆಯದೇ ಏಕಾಏಕಿ ತಿದ್ದುಪಡಿ ಮಾಡುವ ಮೂಲಕ ಪ್ರಜಾಸತ್ತಾತ್ಮಕ ನೀತಿಗಳಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಂಡಿದೆ. ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡಿದೆ’ ಎಂದು ಕಿಡಿಕಾರಿದರು.

ವಿವಿಧ ಸಂಘಟನೆಗಳ ಮುಖಂಡರಾದ ಬಾಲಾಜಿರಾವ್, ಎಚ್‌.ಆರ್‌.ಶೇಷಾದ್ರಿ, ಅನಿಲ್‌ಕುಮಾರ್‌ ನಾ.ದಿವಾಕರ್, ಜಯರಾಮ್‌, ಜಗನ್ನಾಥ್‌, ಜವರಯ್ಯ, ಅನಿಲ್‌ಕುಮಾರ್, ಮೆಹಬೂಬ್‌, ಲೋಕೇಶ್‌, ರಾಜು, ವೆಂಕಟೇಶ್ ಇದ್ದರು.

lokesh

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

5 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

5 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

6 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

11 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

14 hours ago