ಮೈಸೂರು : ದತ್ತು ಸ್ವೀಕಾರ ಸಮಾರಂಭದ ಸಂದರ್ಭದಿಂದಲೇ ನಮ್ಮ ಹಾಗೂ ಜಿ.ಟಿ.ದೇವೇಗೌಡ ಅವರ ಹೊಂದಾಣಿಕೆ ಇದ್ದೇ ಇದೆ ಎಂದು ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ ಚುನಾವಣೆ ಎದುರಿಸುತ್ತಿರುವ ಬೆನ್ನಲ್ಲೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮನ್ನು ದತ್ತು ಪಡೆಯುವ ಕಾರ್ಯಕ್ರಮದ ಸಂದರ್ಭದಿಂದಲೇ ಜಿ.ಟಿ.ದೇವೇಗೌಡ ಅವರ ಹೊಂದಾಣಿಕೆ ನಮ್ಮೊಂದಿಗೆ ಇದ್ದೇ ಇದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿಕ್ಕೆ ಜಿ.ಟಿ.ದೇವೇಗೌಡ ಹಾಗೂ ಎಸ್.ಎ.ರಾಮದಾಸ್, ಅಶ್ವಥ್ ನಾರಾಯಣ್ ಸೇರಿದಂತೆ ಎಲ್ಲಾ ನಾಯಕರ ಬೆಂಬಲ ತುಂಬಾ ಮುಖ್ಯ. ವಿಶೇಷವಾಗಿ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿರುವುದು ತುಂಬ ಶಕ್ತಿ ತಂದಿದೆ ಎಂದರು.
ಶ್ರೇಷ್ಠ ಭಾರತ ನಿರ್ಮಾಣಕ್ಕೆ ಈ ಮೈತ್ರಿ ಹಾಗೂ ಹೊಂದಾಣಿಕೆ ಅನುಕೂಲವಾಗುತ್ತದೆ ಎಂದು ನಾನು ನಂಬಿದ್ದೇನೆ ಎಂದು ತಿಳಿಸಿದರು.
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಉಪ ಮುಖ್ಯಮಂತ್ರಿ ಅಶ್ವಥ ನಾರಾಯಣ್, ಮಾಜಿ ಶಾಸಕ ಎಸ್.ಎ.ರಾಮದಾಸ್, ಚಾಮರಾಜನಗರ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಾಲರಾಜ್ ಸೇರಿದಂತೆ ಮೈತ್ರಿ ಪಕ್ಷಗಳ ಬೆಂಬಲಿಗರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…