ಮೈಸೂರು : ದತ್ತು ಸ್ವೀಕಾರ ಸಮಾರಂಭದ ಸಂದರ್ಭದಿಂದಲೇ ನಮ್ಮ ಹಾಗೂ ಜಿ.ಟಿ.ದೇವೇಗೌಡ ಅವರ ಹೊಂದಾಣಿಕೆ ಇದ್ದೇ ಇದೆ ಎಂದು ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ ಚುನಾವಣೆ ಎದುರಿಸುತ್ತಿರುವ ಬೆನ್ನಲ್ಲೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮನ್ನು ದತ್ತು ಪಡೆಯುವ ಕಾರ್ಯಕ್ರಮದ ಸಂದರ್ಭದಿಂದಲೇ ಜಿ.ಟಿ.ದೇವೇಗೌಡ ಅವರ ಹೊಂದಾಣಿಕೆ ನಮ್ಮೊಂದಿಗೆ ಇದ್ದೇ ಇದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿಕ್ಕೆ ಜಿ.ಟಿ.ದೇವೇಗೌಡ ಹಾಗೂ ಎಸ್.ಎ.ರಾಮದಾಸ್, ಅಶ್ವಥ್ ನಾರಾಯಣ್ ಸೇರಿದಂತೆ ಎಲ್ಲಾ ನಾಯಕರ ಬೆಂಬಲ ತುಂಬಾ ಮುಖ್ಯ. ವಿಶೇಷವಾಗಿ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿರುವುದು ತುಂಬ ಶಕ್ತಿ ತಂದಿದೆ ಎಂದರು.
ಶ್ರೇಷ್ಠ ಭಾರತ ನಿರ್ಮಾಣಕ್ಕೆ ಈ ಮೈತ್ರಿ ಹಾಗೂ ಹೊಂದಾಣಿಕೆ ಅನುಕೂಲವಾಗುತ್ತದೆ ಎಂದು ನಾನು ನಂಬಿದ್ದೇನೆ ಎಂದು ತಿಳಿಸಿದರು.
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಉಪ ಮುಖ್ಯಮಂತ್ರಿ ಅಶ್ವಥ ನಾರಾಯಣ್, ಮಾಜಿ ಶಾಸಕ ಎಸ್.ಎ.ರಾಮದಾಸ್, ಚಾಮರಾಜನಗರ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಾಲರಾಜ್ ಸೇರಿದಂತೆ ಮೈತ್ರಿ ಪಕ್ಷಗಳ ಬೆಂಬಲಿಗರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…