Mysore
24
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

ಒಕ್ಕಲಿಗರು ನನ್ನ ಬೆಂಬಲಕ್ಕೆ ನಿಂತುಕೊಳ್ಳಿ: ಎಲ್ಲವೂ ತೀರ್ಮಾನವಾಗಿದೆ: ಡಿಕೆಶಿ

ಮೈಸೂರು: ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಒಕ್ಕಲಿಗ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಒಕ್ಕಲಿಗರು ತಲೆಕೆಡಿಸಿಕೊಳ್ಳಬೇಡಿ, ದೆಹಲಿಯಲ್ಲಿ ಏನಾಗಗಬೇಕೋ ಆ ತೀರ್ಮಾನ ಆಗಿದೆ. ಸ್ವಲ್ಪ ದಿನ ಕಾಯಿರಿ. ಆ ಬಗ್ಗೆ ಚರ್ಚೆ ಬೇಡಿ. ನೀವು ನನ್ನ ಬೆಂಬಲವಾಗಿ ನಿಂತುಕೊಳ್ಳಿ ಸಾಕು ಎಂದಿದ್ದಾರೆ.

ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಅವಕಾಶ ಕೊಡಲ್ಲ. ಜೆಡಿಎಸ್‌ ಇನ್ಮುಂದೆ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಇದೀಗ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ನನಗೆ ಶಕ್ತಿ ತುಂಬಬೇಕು ಎಂದು ಒಕ್ಕಲಿಗೆ ಸಮುದಾಯದ ಮುಖಂಡರನ್ನು ಕೋರಿದರು.

ಮೈಸೂರಿನಲ್ಲಿ ನಮ್ಮ ಸಮುದಾಯದವರಿಗೆ ರಕ್ಷಣೆ ಇಲ್ಲ. ನಾಯಕತ್ವದ ಕೊರತೆಯೂ ಇದೆ. ಈಗ ಕೆ.ವೆಂಕಟೇಶ್‌, ಕೆ.ಹರೀಶ್‌ ಗೌಡ ಮುಂದಾಳತ್ವ ವಹಿಸಿಕೊಂಡಿದ್ದಾರೆ. ನಾನು ಮೈಸೂರಿನ ಅಳಿಯ, ನನಗೂ ದೊಡ್ಡ ಜವಾಬ್ದಾರಿ ಇದೆ. ಇಲ್ಲಿ ಲಕ್ಷ್ಮಣ್‌ ಸೋತರೆ ನನಗೆ ಹಾಗೂ ಒಕ್ಕಲಿಗೆ ಸಚಿವರಿಗೆ ಬಹಳ ತೊಂದರೆ ಆಗುತ್ತದೆ. ಇದನ್ನ ಗಮನದಲ್ಲಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ರೈತ ಕುಟುಂಬ ಹಿನ್ನಲೆಯ ಸಾಮಾನ್ಯ ಕಾರ್ಯಕರ್ತನಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಅವರನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. 47 ವರ್ಷ ಬಳಿಕ ನಮ್ಮ ಸಮಾಜಕ್ಕೆ ಟಿಕೆಟ್‌ ಸಿಕ್ಕಿದೆ. ನಾನು ಹೆಚ್ಚು ಹೇಳಿಕೊಳ್ಳಲ್ಲ, ಆದರೆ ಸಮಾಜಕ್ಕೆ ಎಲ್ಲೆಲ್ಲಿ ಸಹಾಯ ಮಾಡಬೇಕೋ ಮಾಡಿದ್ದೇನೆ. ಇದೀಗ ಮೈಸೂರು ಕ್ಷೇತ್ರ ಕಳೆದುಕೊಂಡರೆ ಮುಂದೆ ನಮಗೆ ಸಿಗುವುದಿಲ್ಲ ಎನ್ನುವುದನ್ನು ಮರೆಯಬಾರದು ಎಂದು ಹೇಳಿದರು.

ಪ್ರತಾಪ ಸಿಂಹ ಹಾಗೂ ಡಿ.ವಿ ಸದಾನಂದಗೌಡ ಕೊಡಬೇಕಾದ ಸಂದೇಶವನ್ನು ಈಗಾಗಲೇ ಕೊಟ್ಟಿದ್ದಾರೆ. ಇದನ್ನು ಸಮಾಜದವರು ಅರಿಯಬೇಕು ಎಂದರು.

ಸಚಿವರಾದ ಕೆ.ವೆಂಕಟೇಶ್‌, ಎನ್‌ ಚಲುವರಾಯಸ್ವಾಮಿ, ಶಾಸಕ ಹರೀಶ್‌

Tags:
error: Content is protected !!