ಮೈಸೂರು

ಒಕ್ಕಲಿಗರು ನನ್ನ ಬೆಂಬಲಕ್ಕೆ ನಿಂತುಕೊಳ್ಳಿ: ಎಲ್ಲವೂ ತೀರ್ಮಾನವಾಗಿದೆ: ಡಿಕೆಶಿ

ಮೈಸೂರು: ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಒಕ್ಕಲಿಗ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಒಕ್ಕಲಿಗರು ತಲೆಕೆಡಿಸಿಕೊಳ್ಳಬೇಡಿ, ದೆಹಲಿಯಲ್ಲಿ ಏನಾಗಗಬೇಕೋ ಆ ತೀರ್ಮಾನ ಆಗಿದೆ. ಸ್ವಲ್ಪ ದಿನ ಕಾಯಿರಿ. ಆ ಬಗ್ಗೆ ಚರ್ಚೆ ಬೇಡಿ. ನೀವು ನನ್ನ ಬೆಂಬಲವಾಗಿ ನಿಂತುಕೊಳ್ಳಿ ಸಾಕು ಎಂದಿದ್ದಾರೆ.

ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಅವಕಾಶ ಕೊಡಲ್ಲ. ಜೆಡಿಎಸ್‌ ಇನ್ಮುಂದೆ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಇದೀಗ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ನನಗೆ ಶಕ್ತಿ ತುಂಬಬೇಕು ಎಂದು ಒಕ್ಕಲಿಗೆ ಸಮುದಾಯದ ಮುಖಂಡರನ್ನು ಕೋರಿದರು.

ಮೈಸೂರಿನಲ್ಲಿ ನಮ್ಮ ಸಮುದಾಯದವರಿಗೆ ರಕ್ಷಣೆ ಇಲ್ಲ. ನಾಯಕತ್ವದ ಕೊರತೆಯೂ ಇದೆ. ಈಗ ಕೆ.ವೆಂಕಟೇಶ್‌, ಕೆ.ಹರೀಶ್‌ ಗೌಡ ಮುಂದಾಳತ್ವ ವಹಿಸಿಕೊಂಡಿದ್ದಾರೆ. ನಾನು ಮೈಸೂರಿನ ಅಳಿಯ, ನನಗೂ ದೊಡ್ಡ ಜವಾಬ್ದಾರಿ ಇದೆ. ಇಲ್ಲಿ ಲಕ್ಷ್ಮಣ್‌ ಸೋತರೆ ನನಗೆ ಹಾಗೂ ಒಕ್ಕಲಿಗೆ ಸಚಿವರಿಗೆ ಬಹಳ ತೊಂದರೆ ಆಗುತ್ತದೆ. ಇದನ್ನ ಗಮನದಲ್ಲಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ರೈತ ಕುಟುಂಬ ಹಿನ್ನಲೆಯ ಸಾಮಾನ್ಯ ಕಾರ್ಯಕರ್ತನಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಅವರನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. 47 ವರ್ಷ ಬಳಿಕ ನಮ್ಮ ಸಮಾಜಕ್ಕೆ ಟಿಕೆಟ್‌ ಸಿಕ್ಕಿದೆ. ನಾನು ಹೆಚ್ಚು ಹೇಳಿಕೊಳ್ಳಲ್ಲ, ಆದರೆ ಸಮಾಜಕ್ಕೆ ಎಲ್ಲೆಲ್ಲಿ ಸಹಾಯ ಮಾಡಬೇಕೋ ಮಾಡಿದ್ದೇನೆ. ಇದೀಗ ಮೈಸೂರು ಕ್ಷೇತ್ರ ಕಳೆದುಕೊಂಡರೆ ಮುಂದೆ ನಮಗೆ ಸಿಗುವುದಿಲ್ಲ ಎನ್ನುವುದನ್ನು ಮರೆಯಬಾರದು ಎಂದು ಹೇಳಿದರು.

ಪ್ರತಾಪ ಸಿಂಹ ಹಾಗೂ ಡಿ.ವಿ ಸದಾನಂದಗೌಡ ಕೊಡಬೇಕಾದ ಸಂದೇಶವನ್ನು ಈಗಾಗಲೇ ಕೊಟ್ಟಿದ್ದಾರೆ. ಇದನ್ನು ಸಮಾಜದವರು ಅರಿಯಬೇಕು ಎಂದರು.

ಸಚಿವರಾದ ಕೆ.ವೆಂಕಟೇಶ್‌, ಎನ್‌ ಚಲುವರಾಯಸ್ವಾಮಿ, ಶಾಸಕ ಹರೀಶ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು: ಪಿ.ಜಿ.ಪಾಳ್ಯ ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫುಲ್‌ ಖುಷ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ…

10 mins ago

ಪಹಲ್ಗಾಮ್‌ ಮಾದರಿ ದಾಳಿ: ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

ಮುಂಬೈ: ನಿಮ್ಮ ಧರ್ಮ ಯಾವುದು ಎಂದು ಕೇಳಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ದೇಶದ ವಾಣಿಜ್ಯ…

21 mins ago

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು.…

30 mins ago

ಮಕ್ಕಳ ಜೊತೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದ ಪ್ರಧಾನಿ ನರೇಂದ್ರ ಮೋದಿ

ಗ್ಯಾಂಗ್ಟಕ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್‌ನಲ್ಲಿ ಮುಂಜಾನೆ ವೇಳೆ ಪ್ರಧಾನಿ…

2 hours ago

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ…

2 hours ago

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…

2 hours ago