ಮೈಸೂರು: ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಒಕ್ಕಲಿಗ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಒಕ್ಕಲಿಗರು ತಲೆಕೆಡಿಸಿಕೊಳ್ಳಬೇಡಿ, ದೆಹಲಿಯಲ್ಲಿ ಏನಾಗಗಬೇಕೋ ಆ ತೀರ್ಮಾನ ಆಗಿದೆ. ಸ್ವಲ್ಪ ದಿನ ಕಾಯಿರಿ. ಆ ಬಗ್ಗೆ ಚರ್ಚೆ ಬೇಡಿ. ನೀವು ನನ್ನ ಬೆಂಬಲವಾಗಿ ನಿಂತುಕೊಳ್ಳಿ ಸಾಕು ಎಂದಿದ್ದಾರೆ.
ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಅವಕಾಶ ಕೊಡಲ್ಲ. ಜೆಡಿಎಸ್ ಇನ್ಮುಂದೆ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಇದೀಗ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ನನಗೆ ಶಕ್ತಿ ತುಂಬಬೇಕು ಎಂದು ಒಕ್ಕಲಿಗೆ ಸಮುದಾಯದ ಮುಖಂಡರನ್ನು ಕೋರಿದರು.
ಮೈಸೂರಿನಲ್ಲಿ ನಮ್ಮ ಸಮುದಾಯದವರಿಗೆ ರಕ್ಷಣೆ ಇಲ್ಲ. ನಾಯಕತ್ವದ ಕೊರತೆಯೂ ಇದೆ. ಈಗ ಕೆ.ವೆಂಕಟೇಶ್, ಕೆ.ಹರೀಶ್ ಗೌಡ ಮುಂದಾಳತ್ವ ವಹಿಸಿಕೊಂಡಿದ್ದಾರೆ. ನಾನು ಮೈಸೂರಿನ ಅಳಿಯ, ನನಗೂ ದೊಡ್ಡ ಜವಾಬ್ದಾರಿ ಇದೆ. ಇಲ್ಲಿ ಲಕ್ಷ್ಮಣ್ ಸೋತರೆ ನನಗೆ ಹಾಗೂ ಒಕ್ಕಲಿಗೆ ಸಚಿವರಿಗೆ ಬಹಳ ತೊಂದರೆ ಆಗುತ್ತದೆ. ಇದನ್ನ ಗಮನದಲ್ಲಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ರೈತ ಕುಟುಂಬ ಹಿನ್ನಲೆಯ ಸಾಮಾನ್ಯ ಕಾರ್ಯಕರ್ತನಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. 47 ವರ್ಷ ಬಳಿಕ ನಮ್ಮ ಸಮಾಜಕ್ಕೆ ಟಿಕೆಟ್ ಸಿಕ್ಕಿದೆ. ನಾನು ಹೆಚ್ಚು ಹೇಳಿಕೊಳ್ಳಲ್ಲ, ಆದರೆ ಸಮಾಜಕ್ಕೆ ಎಲ್ಲೆಲ್ಲಿ ಸಹಾಯ ಮಾಡಬೇಕೋ ಮಾಡಿದ್ದೇನೆ. ಇದೀಗ ಮೈಸೂರು ಕ್ಷೇತ್ರ ಕಳೆದುಕೊಂಡರೆ ಮುಂದೆ ನಮಗೆ ಸಿಗುವುದಿಲ್ಲ ಎನ್ನುವುದನ್ನು ಮರೆಯಬಾರದು ಎಂದು ಹೇಳಿದರು.
ಪ್ರತಾಪ ಸಿಂಹ ಹಾಗೂ ಡಿ.ವಿ ಸದಾನಂದಗೌಡ ಕೊಡಬೇಕಾದ ಸಂದೇಶವನ್ನು ಈಗಾಗಲೇ ಕೊಟ್ಟಿದ್ದಾರೆ. ಇದನ್ನು ಸಮಾಜದವರು ಅರಿಯಬೇಕು ಎಂದರು.
ಸಚಿವರಾದ ಕೆ.ವೆಂಕಟೇಶ್, ಎನ್ ಚಲುವರಾಯಸ್ವಾಮಿ, ಶಾಸಕ ಹರೀಶ್
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…