ಮೈಸೂರು

ಒಕ್ಕಲಿಗರು ನನ್ನ ಬೆಂಬಲಕ್ಕೆ ನಿಂತುಕೊಳ್ಳಿ: ಎಲ್ಲವೂ ತೀರ್ಮಾನವಾಗಿದೆ: ಡಿಕೆಶಿ

ಮೈಸೂರು: ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಒಕ್ಕಲಿಗ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಒಕ್ಕಲಿಗರು ತಲೆಕೆಡಿಸಿಕೊಳ್ಳಬೇಡಿ, ದೆಹಲಿಯಲ್ಲಿ ಏನಾಗಗಬೇಕೋ ಆ ತೀರ್ಮಾನ ಆಗಿದೆ. ಸ್ವಲ್ಪ ದಿನ ಕಾಯಿರಿ. ಆ ಬಗ್ಗೆ ಚರ್ಚೆ ಬೇಡಿ. ನೀವು ನನ್ನ ಬೆಂಬಲವಾಗಿ ನಿಂತುಕೊಳ್ಳಿ ಸಾಕು ಎಂದಿದ್ದಾರೆ.

ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಅವಕಾಶ ಕೊಡಲ್ಲ. ಜೆಡಿಎಸ್‌ ಇನ್ಮುಂದೆ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಇದೀಗ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ನನಗೆ ಶಕ್ತಿ ತುಂಬಬೇಕು ಎಂದು ಒಕ್ಕಲಿಗೆ ಸಮುದಾಯದ ಮುಖಂಡರನ್ನು ಕೋರಿದರು.

ಮೈಸೂರಿನಲ್ಲಿ ನಮ್ಮ ಸಮುದಾಯದವರಿಗೆ ರಕ್ಷಣೆ ಇಲ್ಲ. ನಾಯಕತ್ವದ ಕೊರತೆಯೂ ಇದೆ. ಈಗ ಕೆ.ವೆಂಕಟೇಶ್‌, ಕೆ.ಹರೀಶ್‌ ಗೌಡ ಮುಂದಾಳತ್ವ ವಹಿಸಿಕೊಂಡಿದ್ದಾರೆ. ನಾನು ಮೈಸೂರಿನ ಅಳಿಯ, ನನಗೂ ದೊಡ್ಡ ಜವಾಬ್ದಾರಿ ಇದೆ. ಇಲ್ಲಿ ಲಕ್ಷ್ಮಣ್‌ ಸೋತರೆ ನನಗೆ ಹಾಗೂ ಒಕ್ಕಲಿಗೆ ಸಚಿವರಿಗೆ ಬಹಳ ತೊಂದರೆ ಆಗುತ್ತದೆ. ಇದನ್ನ ಗಮನದಲ್ಲಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ರೈತ ಕುಟುಂಬ ಹಿನ್ನಲೆಯ ಸಾಮಾನ್ಯ ಕಾರ್ಯಕರ್ತನಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಅವರನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. 47 ವರ್ಷ ಬಳಿಕ ನಮ್ಮ ಸಮಾಜಕ್ಕೆ ಟಿಕೆಟ್‌ ಸಿಕ್ಕಿದೆ. ನಾನು ಹೆಚ್ಚು ಹೇಳಿಕೊಳ್ಳಲ್ಲ, ಆದರೆ ಸಮಾಜಕ್ಕೆ ಎಲ್ಲೆಲ್ಲಿ ಸಹಾಯ ಮಾಡಬೇಕೋ ಮಾಡಿದ್ದೇನೆ. ಇದೀಗ ಮೈಸೂರು ಕ್ಷೇತ್ರ ಕಳೆದುಕೊಂಡರೆ ಮುಂದೆ ನಮಗೆ ಸಿಗುವುದಿಲ್ಲ ಎನ್ನುವುದನ್ನು ಮರೆಯಬಾರದು ಎಂದು ಹೇಳಿದರು.

ಪ್ರತಾಪ ಸಿಂಹ ಹಾಗೂ ಡಿ.ವಿ ಸದಾನಂದಗೌಡ ಕೊಡಬೇಕಾದ ಸಂದೇಶವನ್ನು ಈಗಾಗಲೇ ಕೊಟ್ಟಿದ್ದಾರೆ. ಇದನ್ನು ಸಮಾಜದವರು ಅರಿಯಬೇಕು ಎಂದರು.

ಸಚಿವರಾದ ಕೆ.ವೆಂಕಟೇಶ್‌, ಎನ್‌ ಚಲುವರಾಯಸ್ವಾಮಿ, ಶಾಸಕ ಹರೀಶ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

9 hours ago