ಮೈಸೂರು

ಮೈಸೂರು ದಸರಾಗೆ ಬರುವ ಎಲ್ಲಾ ಆನೆಗಳು ಆರೋಗ್ಯವಾಗಿವೆ : ಡಿಸಿಎಫ್ ಪ್ರಭುಗೌಡ ಮಾಹಿತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಬರುವ ಎಲ್ಲಾ ಆನೆಗಳು ಆರೋಗ್ಯವಾಗಿವೆ ಎಂದು ಡಿಸಿಎಫ್ ಡಾ.ಪ್ರಭುಗೌಡ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಆಗಸ್ಟ್ 4ರಂದು ಗಜಪಯಣ ಹಿನ್ನೆಲೆಯಲ್ಲಿ ಗಜಪಯಣ ಸ್ವಾಗತಕ್ಕೆ ಸಿದ್ಧತೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಚಾಲನೆ ನೀಡಲಿದ್ದಾರೆ. ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಜನಪ್ರತಿನಿದಿನಗಳು ಭಾಗಿಯಾಗಲಿದ್ದಾರೆ.

14 ಆನೆಗಳು ದಸರಾದಲ್ಲಿ ಭಾಗಿಯಾಗುತ್ತಿವೆ. ಮೊದಲ ಹಂತದಲ್ಲಿ 9ನಆನೆಗಳು ಆಗಮಿಸಲಿವೆ. 7 ಗಂಡಾನೆಗಳು, 2 ಹೆಣ್ಣಾನೆಗಳು ಮೊದಲ ಹಂತದಲ್ಲಿ ಆಗಮಿಸುತ್ತಿವೆ. ಸೋಮವಾರ 12.30ಕ್ಕೆ ಪೂಜೆ ನಿಗದಿ ಮಾಡಲಾಗಿದೆ. ಎಲ್ಲಾ ಆನೆಗಳು ಆರೋಗ್ಯವಾಗಿದೆ ಎಂದರು.

ಇನ್ನು ಅಭಿಮನ್ಯು ಬಳಿಕ ಅಂಬಾರಿ ಹೊರುವ ಆನೆ ಯಾವುದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಧನಂಜಯ, ಮಹೇಂದ್ರ, ಪ್ರಶಾಂತ ಆನೆಗಳಿಗೂ ತರಬೇತಿ ನೀಡುತ್ತಿದ್ದೇವೆ. ಅಂಬಾರಿ ಹೊರುವ ಆನೆಗೆ ಹೇಗೆ ತಾಲೀಮು ಮಾಡ್ತೀವಿ ಅದೇ ರೀತಿ ತಾಲೀಮು ಮಾಡ್ತಿದ್ದೇವೆ ಎಂದರು.

ಇನ್ನೂ ಆನೆಗಳು ನಾಡಿಗೆ ಬಂದಾಗ ವಿಶೇಷ ಆಹಾರ ನೀಡ್ತೇವೆ. ಅರಣ್ಯ ವೈದ್ಯಾಧಿಕಾರಿಗಳು ತಿಳಿಸುವ ಹಾಗೆ ಆಹಾರ ನೀಡ್ತೇವೆ. 4 ರಂದು ಮೈಸೂರಿಗೆ ಆನೆಗಳು ಆಗಮಿಸಲಿವೆ. ಮೂರು ದಿನ ಅರಣ್ಯ ಭವನದಲ್ಲಿ ಉಳಿಯಲಿವೆ.
7ರಂದು ಮಧ್ಯಾಹ್ನ ಅರಮನೆ ಆವರಣ ಪ್ರವೇಶ ಮಾಡಲಿವೆ. ಸ್ಪೆಷಲ್ ಫುಡ್ ನೀಡುವ ಮುನ್ನವೇ ಆನೆಗಳ ತೂಕ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

6 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

8 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

10 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

10 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago