All elephants arriving for Mysuru Dasara are healthy: DCF Prabhugowda provides information.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಬರುವ ಎಲ್ಲಾ ಆನೆಗಳು ಆರೋಗ್ಯವಾಗಿವೆ ಎಂದು ಡಿಸಿಎಫ್ ಡಾ.ಪ್ರಭುಗೌಡ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಆಗಸ್ಟ್ 4ರಂದು ಗಜಪಯಣ ಹಿನ್ನೆಲೆಯಲ್ಲಿ ಗಜಪಯಣ ಸ್ವಾಗತಕ್ಕೆ ಸಿದ್ಧತೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಚಾಲನೆ ನೀಡಲಿದ್ದಾರೆ. ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಜನಪ್ರತಿನಿದಿನಗಳು ಭಾಗಿಯಾಗಲಿದ್ದಾರೆ.
14 ಆನೆಗಳು ದಸರಾದಲ್ಲಿ ಭಾಗಿಯಾಗುತ್ತಿವೆ. ಮೊದಲ ಹಂತದಲ್ಲಿ 9ನಆನೆಗಳು ಆಗಮಿಸಲಿವೆ. 7 ಗಂಡಾನೆಗಳು, 2 ಹೆಣ್ಣಾನೆಗಳು ಮೊದಲ ಹಂತದಲ್ಲಿ ಆಗಮಿಸುತ್ತಿವೆ. ಸೋಮವಾರ 12.30ಕ್ಕೆ ಪೂಜೆ ನಿಗದಿ ಮಾಡಲಾಗಿದೆ. ಎಲ್ಲಾ ಆನೆಗಳು ಆರೋಗ್ಯವಾಗಿದೆ ಎಂದರು.
ಇನ್ನು ಅಭಿಮನ್ಯು ಬಳಿಕ ಅಂಬಾರಿ ಹೊರುವ ಆನೆ ಯಾವುದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಧನಂಜಯ, ಮಹೇಂದ್ರ, ಪ್ರಶಾಂತ ಆನೆಗಳಿಗೂ ತರಬೇತಿ ನೀಡುತ್ತಿದ್ದೇವೆ. ಅಂಬಾರಿ ಹೊರುವ ಆನೆಗೆ ಹೇಗೆ ತಾಲೀಮು ಮಾಡ್ತೀವಿ ಅದೇ ರೀತಿ ತಾಲೀಮು ಮಾಡ್ತಿದ್ದೇವೆ ಎಂದರು.
ಇನ್ನೂ ಆನೆಗಳು ನಾಡಿಗೆ ಬಂದಾಗ ವಿಶೇಷ ಆಹಾರ ನೀಡ್ತೇವೆ. ಅರಣ್ಯ ವೈದ್ಯಾಧಿಕಾರಿಗಳು ತಿಳಿಸುವ ಹಾಗೆ ಆಹಾರ ನೀಡ್ತೇವೆ. 4 ರಂದು ಮೈಸೂರಿಗೆ ಆನೆಗಳು ಆಗಮಿಸಲಿವೆ. ಮೂರು ದಿನ ಅರಣ್ಯ ಭವನದಲ್ಲಿ ಉಳಿಯಲಿವೆ.
7ರಂದು ಮಧ್ಯಾಹ್ನ ಅರಮನೆ ಆವರಣ ಪ್ರವೇಶ ಮಾಡಲಿವೆ. ಸ್ಪೆಷಲ್ ಫುಡ್ ನೀಡುವ ಮುನ್ನವೇ ಆನೆಗಳ ತೂಕ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…