ಮೈಸೂರು

ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ದೀರ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ !

  • ಬಿಜೆಪಿಗೆ ಹಾಕಿದ ನಿಮ್ಮ ಓಟಿಗೆ ಕಳೆದ 10 ವರ್ಷದಲ್ಲಿ ಗೌರವ ಬಂದಿದೆಯಾ? ಅವಮಾನ ಆಗಿದೆಯಾ: ಜನರನ್ನು ಪ್ರಶ್ನಿಸಿದ ಸಿಎಂ

ಹುಣಸೂರು : ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಪ್ರಶ್ನಿಸಿದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಧ್ವನಿ-2 ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ ದೇಶದ ಜನತೆ ಹೇಗೆ ಭ್ರಮೆಗೆ ಒಳಗಾಗಿ ಮೋಸಹೋದರು ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಈ ಲೋಕಸಭಾ ಚುನಾವಣೆ ಭಾರತದ ಭವಿಷ್ಯದ ದೃಷ್ಟಿಯಿಂದ, ಭಾರತದ ಆರ್ಥಿಕತೆ ದೃಷ್ಟಿಯಿಂದ ಬಹಳ ನಿರ್ಣಾಯಕವಾಗಿದೆ ಎಂದರು.

ಕಳೆದ ಹತ್ತು ವರ್ಷ ನೀವು ಬಿಜೆಪಿಗೆ ಓಟು ಹಾಕಿದ್ದು ಏಕೆ? ಯಾವ್ಯಾವ ಕಾರಣಗಳಿಂದ ಓಟು ಹಾಕಿದ್ರಿ ಎನ್ನುವುದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಿ. ಮೋದಿ ಹೇಳಿದ್ದರಲ್ಲಿ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ ? ಕಳೆದ ಹತ್ತು ವರ್ಷಗಳಲ್ಲಿ ಭಾರತೀಯರನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಬೇಕಾದ ಒಂದೇ ಒಂದು ಕೆಲಸವನ್ನಾದರೂ ಮಾಡಿದ್ದಾರಾ ಎನ್ನುವುದನ್ನು ನಿಮ್ಮ ಆತ್ಮಸಾಕ್ಷಿಗೆ ಕೇಳಿಕೊಳ್ಳಿ.

ನೀವು ಬಿಜೆಪಿ ಮೇಲಿಟ್ಟಿದ್ದ ನಂಬಿಕೆಗಳಿಗೆ ಮೋಸ ಆಗಿದೆ ತಾನೇ? ನಿಮ್ಮ ನಂಬಿಕೆಗಳಿಗೆ ಮೋಸ ಮಾಡಿ ವಂಚಿಸಿದ ಮೋದಿ ಮತ್ತು ಬಿಜೆಪಿಯ ಸುಳ್ಳುಗಳಿಗೆ ಮತ್ತೆ ಮತ್ತೆ ತಲೆ ಒತ್ತೆ ಇಟ್ಟು ಮರುಳಾಗಬೇಡಿ ಎಂದು ಕರೆ ನೀಡಿದರು.

ನಾವು ನುಡಿದಂತೆ ನಡೆದಿದ್ದೇವೆ. ನಿಮ್ಮ ನಂಬಿಕೆಗಳಿಗೆ, ನಾವು ಕೊಟ್ಟ ಮಾತಿಗೆ ಗೌರವ ಸಲ್ಲಿಸಿದ್ದೇವೆ. ನಿಮ್ಮ ಓಟಿಗೆ ಘನತೆ ತಂದಿದ್ದೇವೆ. ಪ್ರತೀ ಕುಟುಂಬಕ್ಕೆ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುವಂತೆ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ.

ಆದ್ದರಿಂದ ನಿಮ್ಮ ಬದುಕಿಗೆ ನೆರವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ತುಂಬಿ. ಭಾರತೀಯರನ್ನು ನಂಬಿಸಿ ಬಕ್ರಾ ಮಾಡುವ ಮೋದಿಯವರನ್ನು, ಬಿಜೆಪಿಯನ್ನು ನಂಬಿ ಮತ್ತೆ ಮೋಸ ಹೋಗಬೇಡಿ ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಆಶ್ರಯ ಸಮಿತಿ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಹುಣಸೂರು ಮಂಜುನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

1 hour ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

1 hour ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

1 hour ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

2 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

2 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

2 hours ago