ಮೈಸೂರು

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವ ಭಾಗವಹಿಸಿ ಮಾತನಾಡಿದರು.

ಭಕ್ತಿ ಪರಿಶುದ್ಧವಾಗಿರಬೇಕಲ್ಲದೇ, ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ , ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

1978ರಲ್ಲಿ ಈ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17 ಬಾರಿ ಆಯವ್ಯಯಗಳನ್ನು ಮಂಡಿಸುವ ಅವಕಾಶ ದೊರೆತಿದೆ. 13 ಬಾರಿ ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಸೋತ ಸಂದರ್ಭದಲ್ಲಿಯೂ , ಈ ಭಾಗದ ಜನರು ನನ್ನನ್ನೇ ಬೆಂಬಲಿಸಿದ್ದೇನೆ. ನನ್ನ ರಾಜಕೀಯ ಬದುಕಿಗೆ ಇಲ್ಲಿನ ಜನರ ಕೊಡುಗೆ ಅನನ್ಯವಾಗಿದೆ ಎಂದರು.

ನನ್ನ ಗುರುಗಳ ಮಾರ್ಗದರ್ಶನದಿಂದ ಶಿಕ್ಷಣ ಪಡೆದು, ವಕೀಲನಾಗಿ, ರಾಜಕಾರಣಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ನನ್ನ ರಾಜಕೀಯ ಜೀವನ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ. ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಜನರು ಅವರನ್ನು ಬೆಂಬಲಿಸಬೇಕು ಎಂದರು.ರಾಜ್ಯದ ವಿವಿಧ ಜಾತಿ, ಧರ್ಮ, ವರ್ಗಗಳ ಬಡಜನರಿಗೆ ಅನೇಕ ಭಾಗ್ಯಗಳು ಹಾಗೂ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇನೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago