ಮೈಸೂರು

ಸಿದ್ದರಾಮಯ್ಯಗೆ ಗೊತ್ತಿರುವುದು ಬರೀ ದ್ವೇಷ ರಾಜಕಾರಣ: ಜಿ ಟಿ ದೇವೇಗೌಡ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಸಚಿವ ಜಿ ಟಿ ದೇವೇಗೌಡ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಅಸಮಾಧಾನಗೊಂಡು ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ ಜಿ.ಟಿ ದೇವೇಗೌಡ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ತಮ್ಮ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ ಟಿ ದೇವೇಗೌಡ, ಇಷ್ಟು ವರ್ಷಗಳಿಂದ ರಾಜಕೀಯದಲ್ಲಿದ್ದರೂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ, ನನ್ನಷ್ಟು ಗಟ್ಟಿ ಸಿದ್ದರಾಮಯ್ಯ ಅಲ್ಲವೇ ಅಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ರೀತಿ ಅಧಿಕಾರಕ್ಕಾಗಿ ಯಾರ್ ಯಾರ ಮನೆ ಬಾಗಿಲಿಗೂ ಹೋದವನಲ್ಲ ನಾನು ಎಂದು ವ್ಯಂಗ್ಯವಾಡಿದರು.

ತಾಲ್ಲೂಕು ಬೋರ್ಡ್, ಎಪಿಎಂಸಿ, ಡೈರಿಯಲ್ಲಿ ಅಪ್ಪ ಮಕ್ಕಳು ಸೋತವರೆ, ಅಂತಹವರನ್ನು ಕರ್ಕೊಂಡು ಬಂದು ನನ್ನ ವಿರುದ್ಧ ನಿಲ್ಲಿಸಿದ್ದಾರೆ. ಸಿದ್ದರಾಮಯ್ಯ ಬರಿ ದ್ವೇಷಕ್ಕೆ ರಾಜಕಾರಣ ಮಾಡಿದ್ರು. ಅಷ್ಟೂ ಇದ್ರೆ ಅವರಿಗಾಗಿ ಸರ್ವಸ್ವ ತ್ಯಾಗ ಮಾಡಿದ ಮರಿಗೌಡನಿಗೆ ಟಿಕೆಟ್ ಕೊಡಬೇಕಿತ್ತು. ಒಕ್ಕಲಿಗರಲ್ಲೇ ಕೊಡುವುದಿದ್ದರೆ ಸತ್ಯಪ್ಪ ಮಗ ಅರುಣ್, ನರಸೇಗೌಡ, ಕೃಷ್ಣಸಾಗರ್ ಇದ್ರು. ಇವರಿಗೆ ಕೊಟ್ಟಿದ್ರೆ ಗೌರವಯುತವಾಗಿ ಸೋಲುತ್ತಿದ್ದರು ಎಂದು ಹೇಳಿದರು.

ಅವನನ್ನು ನನ್ನ ಮನೆ ಬಾಗಿಲಿಗೆ ಸೇರಿಸುವುದಿಲ್ಲ: ಮಾವಿನಹಳ್ಳಿ ಸಿದ್ದೇಗೌಡ ಅವರ ಊರಲ್ಲೇ ಎಷ್ಟು ವೋಟ್ ತಗೋತಾನೆ ನೋಡೊಣ ಬನ್ನಿ. ಸಿದ್ದೇಗೌಡನನ್ನು ನಾನು ಯಾಕೆ ಬುಕ್ ಮಾಡಲಿ ನಾನು ಸಿದ್ದೇಗೌಡನ‌ ಜೊತೆ ಸೇರೋದು ಬಿಡಿ, ಅವನನ್ನು ನನ್ನ ಮನೆ ಬಾಗಿಲಿಗೆ ಸೇರಿಸಲ್ಲ ಎಂದರು.

ಇನ್ನು, ನಾನು ಗೆಲ್ಲಲಿ ಸೋಲಲಿ ನನ್ನ ಜಾಯಿಮಾನದಲ್ಲಿಯೇ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಲ್ಲ. ಈ ಸಿದ್ದೇಗೌಡನ ಬಗ್ಗೆ ಸಿದ್ದರಾಮಯ್ಯಗೆ ನಾನು ಹೇಳಿದ್ದೆ. ನಾನು ಹೇಳಿದ್ದೆಲ್ಲ ಅವರು ಮರೆತು ಹೋಗಿದ್ದಾರೆ, ನನಗೆ ಹೋದ ಚುನಾವಣೆಯೇ ಕಷ್ಟ ಆಗಲಿಲ್ಲ. ಇನ್ನು ಈಗ ಕಷ್ಟ ಆಗುತ್ತಾ, ಮಾವಿನಹಳ್ಳಿ ಸಿದ್ದೇಗೌಡ ಬುಕ್ ಮಾಡೊದಲ್ಲ, ಜೀವಮಾನದಲ್ಲಿ ಮಾತನಾಡಿಸಲ್ಲ. ನನ್ನ ಬಿಟ್ಟು ಹೋದ ಐದು ಜನರನ್ನೂ ನಾನು ಹತ್ತಿರ ಸೇರಿಸಲ್ಲ ಎಂದರು.

ಈ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಆಶಿರ್ವಾದದಿಂದ ಗೆಲ್ಲುತ್ತೇನೆ ಎಂದ ಜಿ.ಟಿ ದೇವೇಗೌಡ, ಪ್ರಚಾರದ ವೇಳೆ ಎಲ್ಲಾ ಕಾರ್ಯಕರ್ತರು ನನಗೆ ಅದ್ದೂರಿ ಸ್ವಾಗತ ಕೊಟ್ಟಿದ್ದರು. ಜನರು ಭಾರೀ ಉತ್ಸಾಹದಿಂದ, ಪ್ರೀತಿಯಿಂದ ಜಿ.ಟಿ ದೇವೇಗೌಡರನ್ನು ಗೆಲ್ಲಿಸುವ ಮನಸ್ಸು ಮಾಡಿದ್ದಾರೆ ಎಂದು ಹೇಳಿದರು.

andolanait

Recent Posts

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

13 mins ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

10 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

13 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

13 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

13 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

14 hours ago