ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಸಚಿವ ಜಿ ಟಿ ದೇವೇಗೌಡ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಅಸಮಾಧಾನಗೊಂಡು ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ ಜಿ.ಟಿ ದೇವೇಗೌಡ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ತಮ್ಮ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ ಟಿ ದೇವೇಗೌಡ, ಇಷ್ಟು ವರ್ಷಗಳಿಂದ ರಾಜಕೀಯದಲ್ಲಿದ್ದರೂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ, ನನ್ನಷ್ಟು ಗಟ್ಟಿ ಸಿದ್ದರಾಮಯ್ಯ ಅಲ್ಲವೇ ಅಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ರೀತಿ ಅಧಿಕಾರಕ್ಕಾಗಿ ಯಾರ್ ಯಾರ ಮನೆ ಬಾಗಿಲಿಗೂ ಹೋದವನಲ್ಲ ನಾನು ಎಂದು ವ್ಯಂಗ್ಯವಾಡಿದರು.
ತಾಲ್ಲೂಕು ಬೋರ್ಡ್, ಎಪಿಎಂಸಿ, ಡೈರಿಯಲ್ಲಿ ಅಪ್ಪ ಮಕ್ಕಳು ಸೋತವರೆ, ಅಂತಹವರನ್ನು ಕರ್ಕೊಂಡು ಬಂದು ನನ್ನ ವಿರುದ್ಧ ನಿಲ್ಲಿಸಿದ್ದಾರೆ. ಸಿದ್ದರಾಮಯ್ಯ ಬರಿ ದ್ವೇಷಕ್ಕೆ ರಾಜಕಾರಣ ಮಾಡಿದ್ರು. ಅಷ್ಟೂ ಇದ್ರೆ ಅವರಿಗಾಗಿ ಸರ್ವಸ್ವ ತ್ಯಾಗ ಮಾಡಿದ ಮರಿಗೌಡನಿಗೆ ಟಿಕೆಟ್ ಕೊಡಬೇಕಿತ್ತು. ಒಕ್ಕಲಿಗರಲ್ಲೇ ಕೊಡುವುದಿದ್ದರೆ ಸತ್ಯಪ್ಪ ಮಗ ಅರುಣ್, ನರಸೇಗೌಡ, ಕೃಷ್ಣಸಾಗರ್ ಇದ್ರು. ಇವರಿಗೆ ಕೊಟ್ಟಿದ್ರೆ ಗೌರವಯುತವಾಗಿ ಸೋಲುತ್ತಿದ್ದರು ಎಂದು ಹೇಳಿದರು.
ಅವನನ್ನು ನನ್ನ ಮನೆ ಬಾಗಿಲಿಗೆ ಸೇರಿಸುವುದಿಲ್ಲ: ಮಾವಿನಹಳ್ಳಿ ಸಿದ್ದೇಗೌಡ ಅವರ ಊರಲ್ಲೇ ಎಷ್ಟು ವೋಟ್ ತಗೋತಾನೆ ನೋಡೊಣ ಬನ್ನಿ. ಸಿದ್ದೇಗೌಡನನ್ನು ನಾನು ಯಾಕೆ ಬುಕ್ ಮಾಡಲಿ ನಾನು ಸಿದ್ದೇಗೌಡನ ಜೊತೆ ಸೇರೋದು ಬಿಡಿ, ಅವನನ್ನು ನನ್ನ ಮನೆ ಬಾಗಿಲಿಗೆ ಸೇರಿಸಲ್ಲ ಎಂದರು.
ಇನ್ನು, ನಾನು ಗೆಲ್ಲಲಿ ಸೋಲಲಿ ನನ್ನ ಜಾಯಿಮಾನದಲ್ಲಿಯೇ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಲ್ಲ. ಈ ಸಿದ್ದೇಗೌಡನ ಬಗ್ಗೆ ಸಿದ್ದರಾಮಯ್ಯಗೆ ನಾನು ಹೇಳಿದ್ದೆ. ನಾನು ಹೇಳಿದ್ದೆಲ್ಲ ಅವರು ಮರೆತು ಹೋಗಿದ್ದಾರೆ, ನನಗೆ ಹೋದ ಚುನಾವಣೆಯೇ ಕಷ್ಟ ಆಗಲಿಲ್ಲ. ಇನ್ನು ಈಗ ಕಷ್ಟ ಆಗುತ್ತಾ, ಮಾವಿನಹಳ್ಳಿ ಸಿದ್ದೇಗೌಡ ಬುಕ್ ಮಾಡೊದಲ್ಲ, ಜೀವಮಾನದಲ್ಲಿ ಮಾತನಾಡಿಸಲ್ಲ. ನನ್ನ ಬಿಟ್ಟು ಹೋದ ಐದು ಜನರನ್ನೂ ನಾನು ಹತ್ತಿರ ಸೇರಿಸಲ್ಲ ಎಂದರು.
ಈ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಆಶಿರ್ವಾದದಿಂದ ಗೆಲ್ಲುತ್ತೇನೆ ಎಂದ ಜಿ.ಟಿ ದೇವೇಗೌಡ, ಪ್ರಚಾರದ ವೇಳೆ ಎಲ್ಲಾ ಕಾರ್ಯಕರ್ತರು ನನಗೆ ಅದ್ದೂರಿ ಸ್ವಾಗತ ಕೊಟ್ಟಿದ್ದರು. ಜನರು ಭಾರೀ ಉತ್ಸಾಹದಿಂದ, ಪ್ರೀತಿಯಿಂದ ಜಿ.ಟಿ ದೇವೇಗೌಡರನ್ನು ಗೆಲ್ಲಿಸುವ ಮನಸ್ಸು ಮಾಡಿದ್ದಾರೆ ಎಂದು ಹೇಳಿದರು.
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…