ಮೈಸೂರು: ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯಾತೀತ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ಸಿದ್ದರಾಮಯ್ಯರಿಗೆ ಗರ್ವ ಎನ್ನುತ್ತಿದ್ದಾರೆ ದೇವೇಗೌಡರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಾಮರಾಜ ಕ್ಷೇತ್ರದಲ್ಲಿ ನಡೆದ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳು ಜಾತ್ಯತೀತವಾಗಿಲ್ಲ. ಯಾವುದೇ ಕಾರಣಕ್ಕೂ ನಮ್ಮದು ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್, ನನ್ನನ್ನೂ(ಸಿದ್ದರಾಮಯ್ಯ) ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದರು.
ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ ಎಂದು ತಿಳಿಸಿದರು.
ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ ಅಭಿವೃದ್ಧಿ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಿ ಎಂದು ಪ್ರಶ್ನಿಸಿದರು.
ಬರೀ ಶ್ರೀಮಂತರು ಹೊಟ್ಟೆ ತುಂಬಿಸಿಕೊಂಡು ಮಲಗೋದಲ್ಲ. ಬಡವರೂ ರಾತ್ರಿ ಹೊಟ್ಟೆತುಂಬ ಊಟ ಮಾಡಿ ಮಲಗಬೇಕು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದೆವು. ನಮ್ಮ ಭಾಗ್ಯಗಳೆಲ್ಲಾ ಬಡವರ ಬದುಕಿಗೆ ಆಸರೆಯಾದವು ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…