ಮೈಸೂರು

ದೇವೇಗೌಡರ ಕುರಿತು ನಮಗಿರುವುದು ರಾಜಕೀಯ ವಿರೋಧ ಅಷ್ಟೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯಾತೀತ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ಸಿದ್ದರಾಮಯ್ಯರಿಗೆ ಗರ್ವ ಎನ್ನುತ್ತಿದ್ದಾರೆ ದೇವೇಗೌಡರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜ ಕ್ಷೇತ್ರದಲ್ಲಿ ನಡೆದ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ಜೆಡಿಎಸ್‌ ವರಿಷ್ಠ ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳು ಜಾತ್ಯತೀತವಾಗಿಲ್ಲ. ಯಾವುದೇ ಕಾರಣಕ್ಕೂ ನಮ್ಮದು ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್, ನನ್ನನ್ನೂ(ಸಿದ್ದರಾಮಯ್ಯ) ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದರು.

ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ ಎಂದು ತಿಳಿಸಿದರು.

ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ ಅಭಿವೃದ್ಧಿ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಿ ಎಂದು ಪ್ರಶ್ನಿಸಿದರು.

ಬರೀ ಶ್ರೀಮಂತರು ಹೊಟ್ಟೆ ತುಂಬಿಸಿಕೊಂಡು ಮಲಗೋದಲ್ಲ. ಬಡವರೂ ರಾತ್ರಿ ಹೊಟ್ಟೆತುಂಬ ಊಟ ಮಾಡಿ ಮಲಗಬೇಕು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದೆವು. ನಮ್ಮ ಭಾಗ್ಯಗಳೆಲ್ಲಾ ಬಡವರ ಬದುಕಿಗೆ ಆಸರೆಯಾದವು ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago