ಮೈಸೂರು

ಕರ್ತವ್ಯ ಲೋಪ ಆರೋಪ : ತಹಶೀಲ್ದಾರ್ ಸೇರಿ 6 ಮಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಸಿಗೆ ಪತ್ರ

ಎಚ್.ಡಿ.ಕೋಟೆ : ಅಕ್ರಮ ಸಕ್ರಮ ಖಾತೆ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ನಿರ್ಗಮಿತ ತಹಶೀಲ್ದಾರ್ ಕೆ.ಆರ್.ರತ್ನಾಂಬಿಕೆ, ಶಿರಸ್ತೇದಾರ್ ಕುಮಾರ್, ಕಂದಾಯ ನಿರೀಕ್ಷಕ ಮಹೇಶ್, ಗುಮಾಸ್ತ ವಿಷ್ಣು, ಗ್ರಾಮ ಲೆಕ್ಕಿಗ ಅನಿಲ್, ತಾಲ್ಲೂಕು ಕಚೇರಿ ಗುಮಾಸ್ತ ಹರೀಶ್ ವಿರುದ್ಧ ಕ್ರಮ ಜರುಗಿಸುವಂತೆ ಹುಣಸೂರು ಉಪ ವಿಭಾಗಾಧಿಕಾರಿ ರುಚಿ ಬಿಂದಾಲ್‌ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ತಾಲ್ಲೂಕಿನ ಪಡುವಕೋಟೆ ಗ್ರಾಮದ ಸರ್ವೆ ನಂಬರ್‌ಗೆ ಸಂಬಂಧಿಸಿದಂತೆ ಎರಡು ಪ್ರಕರಣಗಳಲ್ಲಿ ಅಕ್ರಮ ಸಕ್ರಮದಡಿ ಖಾತೆ ಮಾಡುವಾಗ ದಾಖಲಾತಿಗಳ ಪರಿಶೀಲನೆಯನ್ನು ಸರಿಯಾಗಿ ಮಾಡದೆ ಕರ್ತವ್ಯ ಲೋಪ ಎಸಗಿದ್ದಾರೆ. ಇವರನ್ನು ಅಮಾನತು ಪಡಿಸಿ ಇಲಾಖಾ ವಿಚಾರಣೆಗೆ ಒಳಪಡಿಸಿ ಶಿಸ್ತು ಕ್ರಮ ಜರುಗಿಸಬೇಕೆಂದು ಪತ್ರದಲ್ಲಿ ಕೋರಿದ್ದಾರೆ.

ಜಮೀನಿನನ್ನು ಮುಜರಾಯಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಹರೀಶ್‌ ಅವರ ಪತ್ನಿ ಭವ್ಯ ಅವರ ಹೆಸರಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಗಂಡೇಗೌಡರ ಕಾಲೊನಿಯ ರವಿ ದೂರು ನೀಡಿದ್ದರು.

ಮತ್ತೊಂದು ಪ್ರಕರಣದಲ್ಲಿ ಮುರುಗನಹಳ್ಳಿಯ ಮಾದಮ್ಮ ಸಾಗುವಳಿ ಮಾಡುತ್ತಿದ್ದು ಜಮೀನನ್ನು ಮೈಸೂರಿನ ಸುಜಾತ ಎಂಬುವರಿಗೆ 2 ಎಕರೆ ಮಂಜೂರಾತಿ ನೀಡಲು ನಕಲು ದಾಖಲಾತಿ ಸೃಷ್ಟಿಸಲು ಗ್ರಾಮ ಲೆಕ್ಕಿಗ ಅನಿಲ್ ಮತ್ತು ರಾಜಸ್ವ ನಿರೀಕ್ಷಕ ಮಹೇಶ್ ಸಹಾಯ ಮಾಡಿದ್ದಾರೆ. ಇದೇ ಜಾಗದಲ್ಲಿ ಕೋಳಿ ಫಾರಂ ಕಟ್ಟಡ ನಿರ್ಮಾಣದ ಜವಾಬ್ದಾರಿಯನ್ನೂ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಅಕ್ರಮ ಸಕ್ರಮದಡಿ ಖಾತೆ ವಿಚಾರದಲ್ಲಿ ಕರ್ತವ್ಯ ಲೋಪ ಅಮಾನತು ಪಡಿಸಿ ಶಿಸ್ತು ಕ್ರಮ ಜರುಗಿಸಲು ಮನವಿ

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

15 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago