ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವ ಕೆ. ವೆಂಕಟೇಶ್ ದ್ವೇಷದ ರಾಜಕಾರಣ ಮಾಡುತ್ತಾ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಗಂಭೀರ ಆರೋಪ ಮಾಡಿದ್ದಾರೆ.
ಕೆ.ವೆಂಕಟೇಶ್ ಸಚಿವರಾದಗಿನಿಂದಲೂ ಒಂದಲ್ಲ ಒಂದು ಕಿರುಕುಳ ನೀಡುತ್ತಿದ್ದಾರೆ. ತಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ ದ್ವೇಷದ ರಾಜಕಾರಣ ಮಾಡುತ್ತ, ಮೈಮುಲ್ ಅಧ್ಯಕ್ಷ ಸ್ಥಾನದಿಂದ ನನ್ನನ್ನ ಇಳಿಸಲು ಸತತ ಪ್ರಯತ್ನ ಮಾಡುತ್ತಿದ್ದಾರೆ. ಜೊತೆಗೆ ಅಧಿಕಾರಿಗಳನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದರು.
ನನ್ನನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಲು ಮೈಮುಲ್ನ ಇತರ ಸದಸ್ಯರ ಮೇಲೆ ಒತ್ತಡ ಹೇರುತ್ತಿದ್ದಾರೆ. ವಾಸಸ್ಥಳ ದೃಡೀಕರಣ ಪತ್ರ, 65 ಎನ್ಕ್ವೈರಿ, 64 ಎನ್ಕ್ವೈರಿ ಹೆಸರಿನ್ನಲ್ಲಿ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೆ ಅಧಿಕಾರಿಗಳನ್ನು ಬೆಳಗಿನ ಜಾವ 5 ಗಂಟೆಗೆನೇ ಹಾಲು ಉತ್ಪಾದಕ ಕೇಂದ್ರಗಳಿಗೆ ಕಳುಹಿಸಿ ತೊಂದರೆ ಕೊಡುವುದಲ್ಲದೆ ಮೈಮುಲ್ ನ ಇತರ ನಿರ್ದೇಶಕರ ಮೇಲೂ ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಿದರು.
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…
ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…
ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…