ಮೈಸೂರು: ನಿನ್ನೆ(ಆ.10)ದೋಸ್ತಿಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಟಿ ಬೀಸಿ, ಸರ್ಕಾರದ ಶಕ್ತಿ ಪ್ರದರ್ಶನ ಮಾಡಿದ್ದರು. ಅದೇ ರೀತಿ ಇಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ಕೊಡಲು ಮೈತ್ರಿ ನಾಯಕರು ಸಹ ಸಜ್ಜಾಗಿದ್ದಾರೆ.
ಶುಕ್ರವಾರ(ಆ.9) ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ ನಗರದ ಮಹಾರಾಜ ಕಾಲೇಜು ಮೈದಾನದ ಬೃಹತ್ ವೇದಿಕೆಯಲ್ಲೇ ಇಂದು (ಆ.10) ಮೈತ್ರಿ ಪಕ್ಷಗಳ ಸಮಾರೋಪ ಸಮಾವೇಶ ನಡೆಯಲಿದೆ.
ಮೈತ್ರಿ ನಾಯಕರಿಂದ ಸಮಾವೇಶಕ್ಕೂ ಮುನ್ನ ಎರಡು ಕಿ.ಮೀ ಪಾದಯಾತ್ರೆ ನಡೆಯಲಿದೆ. ಸಮಾವೇಶದಲ್ಲಿ ಮುಡಾ ಹಗರಣ, ವಾಲ್ಮೀಕಿ ಹಗರಣ ಹಾಗೂ ರಾಜ್ಯ ಸರ್ಕಾರದ ಅಕ್ರಮಗಳಲ್ಲೇ ವೇದಿಕೆಯಲ್ಲಿ ಪ್ರತಿಧ್ವನಿಸಲಿದೆ.
ಎರಡು ಪಕ್ಷಗಳ ಕಾರ್ಯರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯಾವ ರೀತಿ ಗುಡುಗಿದರೊ ಅದೇ ರೀತಿ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಘರ್ಜಿಸಲಿದ್ದಾರೆ. ಇದೆಲ್ಲಾ ಒಂದು ರೀತಿ ಸವಾಲ್ಗೆ ಪ್ರತಿ ಸವಾಲ್ ಆಗಿದ್ದು, ಮೈತ್ರಿ ನಾಯಕರು ನಾವು ಇಮ್ಮ ಹಗರಣ ಬಿಚ್ಚುಡುತ್ತೇವೆ ಎಂದರೆ ಕಾಂಗ್ರೆಸ್ ನಾಯಕರು ಸಹ ನಿಮ್ಮ ಕಾಲದ ಹಗರಣಗಳನ್ನು ಬಿಚ್ಚಿಟ್ಟು ತನಿಖೆಗೆ ಕೊಡುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…
ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…