ಮೈಸೂರು

ತರಕಾರಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ; ಜಿಲ್ಲಾಡಳಿತಕ್ಕೆ ಕೃತಜ್ಞತೆ

ಮೈಸೂರು : ಇತ್ತೀಚೆಗೆ ನಗರದ ಎಂಜಿ ರಸ್ತೆಯಲ್ಲಿ ಸಣ್ಣ ತರಕಾರಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಮಾಡದೆ ಅವರ ಎಲ್ಲಾ ಮಳಿಗೆಗಳನ್ನು ತೆರವುಗೊಳಿಸಲಾಗಿತ್ತು. ಇದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿ ನಾವು ಹೇಗೆ ಜೀವನ ನಡೆಸುವುದು, ನಮಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಿ ಎಂದು ಗೋಳಾಡಿದ್ದರು.

ಈ ವಿಚಾರವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ  ರಾಜ್ಯ ಕಾರ್ಯದರ್ಶಿ ಮಂಜು ಕಿರಣ್ ನೇತೃತ್ವದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಡಳಿತಕ್ಕೆ ಸಣ್ಣ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಮನವಿ ಸಲ್ಲಿಸಲಾಗಿತ್ತು. ಈ ಕುರಿತು ಮಾಧ್ಯಮಗಳಲ್ಲೂ ಸವಿಸ್ತಾರವಾಗಿ ವ್ಯಾಪಾರಸ್ಥರ ಪರಿಸ್ಥಿತಿಯನ್ನ ಎಳೆ ಎಳೆಯಾಗಿ ಬಿಚ್ಚಿಡಲಾಗಿತ್ತು.

ಅದಕ್ಕೆ ಪೂರಕವಾಗಿ ಜಿಲ್ಲಾಡಳಿತ ಅವರ ಮನವಿಗೆ ಸ್ಪಂದಿಸಿ ಸ್ಥಳಾಂತರಗೊಂಡಿದ್ದ 21 ಸಣ್ಣ ವ್ಯಾಪಾರಿಗಳಿಗೆ ಮಾರುಕಟ್ಟೆಯಲ್ಲಿ ಪರ್ಯಾಯ ವ್ಯವಸ್ಥೆ ಮಾಡಿಕೊಡಲು ನಿಶ್ಚಯಿಸಲಾಗಿದೆ. ಹೀಗಾಗಿ ಮಾಧ್ಯಮದವರು ಮತ್ತು ಅಧಿಕಾರಿಗಳಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ  ರಾಜ್ಯ ಕಾರ್ಯದರ್ಶಿ ಮಂಜು ಕಿರಣ್ ಧನ್ಯವಾದ ತಿಳಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

56 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago