ಮೈಸೂರು

ಜನರ ಸೇವೆ ಮಾಡಲು ನಾನು ರಾಜಕೀಯಕ್ಕೆ ಬಂದಿದ್ದೇನೆ: ರಾಜವಂಶಸ್ಥ ಯದುವೀರ್‌

ಮೈಸೂರು: ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಇದಕ್ಕಾಗಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.

ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಿವೇದಿತಾ ನಗರದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಾನು ರಾಜಕೀಯಕ್ಕೆ ಬರಬೇಕೆಂದು ಒಂದು ವರ್ಷದ ಹಿಂದೆಯೇ ಚಿಂತನೆ ನಡೆಸಿದ್ದೆ, ಕಳೆದ 9 ವರ್ಷಗಳಿಂದ ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಜನರ ಸೇವೆ ಮಾಡಲು ಇಚ್ಛಿಸಿದ್ದು, ಅದಕ್ಕಾಗಿ ರಾಜಕೀಯಕ್ಕೆ ಬಂದಿದ್ದೇನೆ ಎಂದು ಯದುವೀರ್‌ ಹೇಳಿದರು.

ಸಮಾಜವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಮೈಸೂರು ಅರಸರು ಮೀಸಲಾತಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಅದೇ ರೀತಿ ಕೇಂದ್ರ ಸರ್ಕಾರ ಜನರ ಏಳಿಗೆಗೆ ಶ್ರಮಿಸುತ್ತಿದೆ. ಇದರೊಂದಿಗೆ ಪರಂಪರೆಯ ರಕ್ಷಣೆ, ಭಾರತೀಯರ ಮೂಲಕ ಆಶಯಗಳನ್ನು ಉಳಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ. ಇವೆಲ್ಲವೂ ನಮಗೆ ಸ್ಫೂರ್ತಿ ನೀಡಿದ್ದು, ವಿಕಸಿತ ಭಾರತ ಕಟ್ಟುವ ಕೆಲಸ ಮಾಡುವ ನಿಟ್ಟಿನಲ್ಲಿ ಶ್ರಮಿಸೋಣ ಎಂದು ಯದುವೀರ್‌ ಕರೆ ನೀಡಿದರು.

ಶಾಸಕ ಟಿ.ಎಸ್‌. ಶ್ರೀವತ್ಸ, ನಗರಾಧ್ಯಕ್ಷ ಎಲ್. ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಧ್ಯಕ್ಷೆ ಮಂಜುಳ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮಾಜಿ ಮೇಯರ್ ಶಿವಕುಮಾರ್ ಇತರರು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

4 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

4 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

4 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

4 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

5 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

5 hours ago