ಮೈಸೂರು: ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಇದಕ್ಕಾಗಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಿವೇದಿತಾ ನಗರದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಾನು ರಾಜಕೀಯಕ್ಕೆ ಬರಬೇಕೆಂದು ಒಂದು ವರ್ಷದ ಹಿಂದೆಯೇ ಚಿಂತನೆ ನಡೆಸಿದ್ದೆ, ಕಳೆದ 9 ವರ್ಷಗಳಿಂದ ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಜನರ ಸೇವೆ ಮಾಡಲು ಇಚ್ಛಿಸಿದ್ದು, ಅದಕ್ಕಾಗಿ ರಾಜಕೀಯಕ್ಕೆ ಬಂದಿದ್ದೇನೆ ಎಂದು ಯದುವೀರ್ ಹೇಳಿದರು.
ಸಮಾಜವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಮೈಸೂರು ಅರಸರು ಮೀಸಲಾತಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಅದೇ ರೀತಿ ಕೇಂದ್ರ ಸರ್ಕಾರ ಜನರ ಏಳಿಗೆಗೆ ಶ್ರಮಿಸುತ್ತಿದೆ. ಇದರೊಂದಿಗೆ ಪರಂಪರೆಯ ರಕ್ಷಣೆ, ಭಾರತೀಯರ ಮೂಲಕ ಆಶಯಗಳನ್ನು ಉಳಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ. ಇವೆಲ್ಲವೂ ನಮಗೆ ಸ್ಫೂರ್ತಿ ನೀಡಿದ್ದು, ವಿಕಸಿತ ಭಾರತ ಕಟ್ಟುವ ಕೆಲಸ ಮಾಡುವ ನಿಟ್ಟಿನಲ್ಲಿ ಶ್ರಮಿಸೋಣ ಎಂದು ಯದುವೀರ್ ಕರೆ ನೀಡಿದರು.
ಶಾಸಕ ಟಿ.ಎಸ್. ಶ್ರೀವತ್ಸ, ನಗರಾಧ್ಯಕ್ಷ ಎಲ್. ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಧ್ಯಕ್ಷೆ ಮಂಜುಳ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮಾಜಿ ಮೇಯರ್ ಶಿವಕುಮಾರ್ ಇತರರು ಹಾಜರಿದ್ದರು.
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…