ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುತ್ತದೆಯೋ ಇಲ್ಲವೋ ಎಂಬ ಪ್ರಶ್ನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.
ಟಿಕೆಟ್ ಊಹಾಪೋಹಗಳಿಗೆ ಸೋಮವಾರ ತಡರಾತ್ರಿ ಫೇಸ್ ಬುಕ್ ಲೈವ್ನಲ್ಲಿ ಬಂದು ಕ್ಷೇತ್ರದ ಬಗ್ಗೆ ಹಾಗೂ ತಮ್ಮ ಪ್ರಗತಿ ಬಗ್ಗೆ ಮಾತನಾಡುತ್ತಾ ಭಾವುಕರಾಗಿದ್ದರು. ಇವೆಲ್ಲದರ ನಡುವೆ ಇಂದು (ಮಾ.೧೨) ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂಸದರು, ತಮಗೆ ಟಿಕೆಟ್ ಸಿಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ಕೈ ತಪ್ಪಿರುವುದು ಇನ್ನು ಖಚಿತವಾಗಿಲ್ಲ. ಸಿಈಸಿ ಸಭೆಯ ತೀರ್ಮಾನದ ಬಗ್ಗೆ ನನಗೆ ಮಾಹಿತಿಯಿಲ್ಲ. ಈವರೆಗೆ ಟಿಕೆಟ್ ಸಿಗದಿರುವ ಬಗ್ಗೆ ಅಧಿಕೃತ ಘೋಷಣೆಯಾಗದಿರುವ ಕಾರಣ ನನಗೆ ಖಚಿತವಾಗಿ ಟಿಕೆಟ್ ಸಿಗುವ ವಿಶ್ವಾಸವಂತೂ ಇದೆ ಎಂದು ಸಂಸದ ಪ್ರತಾಪಸಸ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.
ನನಗೆ ಟಿಕೆಟ್ ಸಿಗಲಿ ಬಿಡಲಿ, ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ನಾನು ಆಭಾರಿಯಾದ್ದೇನೆ. ಮೈಸೂರು, ಕೊಡಗು ಮಾತ್ರವಲ್ಲ ಕ್ಷೇತ್ರದಾಚೆಗೂ ಜನರು ನನಗೆ ಟಿಕೆಟ್ ಸಿಗುವಂತೆ ಆಗ್ರಹಿಸಿದ್ದಾರೆ. ನನ್ನ ಟಿಕೆಟ್ ವಿಚಾರದ ಸದ್ಯ ಟ್ರೆಂಡಿಂಗ್ ಆಗಿದೆ. ಇಂತಹ ಜನರ ಪ್ರೀತಿ ಗಳಿಸಿದ ನಾನು ನಿಜಕ್ಕೂ ಭಾಗ್ಯಶಾಲಿ ಎಂದು ತಿಳಿಸಿದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…