ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುತ್ತದೆಯೋ ಇಲ್ಲವೋ ಎಂಬ ಪ್ರಶ್ನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.
ಟಿಕೆಟ್ ಊಹಾಪೋಹಗಳಿಗೆ ಸೋಮವಾರ ತಡರಾತ್ರಿ ಫೇಸ್ ಬುಕ್ ಲೈವ್ನಲ್ಲಿ ಬಂದು ಕ್ಷೇತ್ರದ ಬಗ್ಗೆ ಹಾಗೂ ತಮ್ಮ ಪ್ರಗತಿ ಬಗ್ಗೆ ಮಾತನಾಡುತ್ತಾ ಭಾವುಕರಾಗಿದ್ದರು. ಇವೆಲ್ಲದರ ನಡುವೆ ಇಂದು (ಮಾ.೧೨) ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂಸದರು, ತಮಗೆ ಟಿಕೆಟ್ ಸಿಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ಕೈ ತಪ್ಪಿರುವುದು ಇನ್ನು ಖಚಿತವಾಗಿಲ್ಲ. ಸಿಈಸಿ ಸಭೆಯ ತೀರ್ಮಾನದ ಬಗ್ಗೆ ನನಗೆ ಮಾಹಿತಿಯಿಲ್ಲ. ಈವರೆಗೆ ಟಿಕೆಟ್ ಸಿಗದಿರುವ ಬಗ್ಗೆ ಅಧಿಕೃತ ಘೋಷಣೆಯಾಗದಿರುವ ಕಾರಣ ನನಗೆ ಖಚಿತವಾಗಿ ಟಿಕೆಟ್ ಸಿಗುವ ವಿಶ್ವಾಸವಂತೂ ಇದೆ ಎಂದು ಸಂಸದ ಪ್ರತಾಪಸಸ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.
ನನಗೆ ಟಿಕೆಟ್ ಸಿಗಲಿ ಬಿಡಲಿ, ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ನಾನು ಆಭಾರಿಯಾದ್ದೇನೆ. ಮೈಸೂರು, ಕೊಡಗು ಮಾತ್ರವಲ್ಲ ಕ್ಷೇತ್ರದಾಚೆಗೂ ಜನರು ನನಗೆ ಟಿಕೆಟ್ ಸಿಗುವಂತೆ ಆಗ್ರಹಿಸಿದ್ದಾರೆ. ನನ್ನ ಟಿಕೆಟ್ ವಿಚಾರದ ಸದ್ಯ ಟ್ರೆಂಡಿಂಗ್ ಆಗಿದೆ. ಇಂತಹ ಜನರ ಪ್ರೀತಿ ಗಳಿಸಿದ ನಾನು ನಿಜಕ್ಕೂ ಭಾಗ್ಯಶಾಲಿ ಎಂದು ತಿಳಿಸಿದರು.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…