ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುತ್ತದೆಯೋ ಇಲ್ಲವೋ ಎಂಬ ಪ್ರಶ್ನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.
ಟಿಕೆಟ್ ಊಹಾಪೋಹಗಳಿಗೆ ಸೋಮವಾರ ತಡರಾತ್ರಿ ಫೇಸ್ ಬುಕ್ ಲೈವ್ನಲ್ಲಿ ಬಂದು ಕ್ಷೇತ್ರದ ಬಗ್ಗೆ ಹಾಗೂ ತಮ್ಮ ಪ್ರಗತಿ ಬಗ್ಗೆ ಮಾತನಾಡುತ್ತಾ ಭಾವುಕರಾಗಿದ್ದರು. ಇವೆಲ್ಲದರ ನಡುವೆ ಇಂದು (ಮಾ.೧೨) ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂಸದರು, ತಮಗೆ ಟಿಕೆಟ್ ಸಿಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ಕೈ ತಪ್ಪಿರುವುದು ಇನ್ನು ಖಚಿತವಾಗಿಲ್ಲ. ಸಿಈಸಿ ಸಭೆಯ ತೀರ್ಮಾನದ ಬಗ್ಗೆ ನನಗೆ ಮಾಹಿತಿಯಿಲ್ಲ. ಈವರೆಗೆ ಟಿಕೆಟ್ ಸಿಗದಿರುವ ಬಗ್ಗೆ ಅಧಿಕೃತ ಘೋಷಣೆಯಾಗದಿರುವ ಕಾರಣ ನನಗೆ ಖಚಿತವಾಗಿ ಟಿಕೆಟ್ ಸಿಗುವ ವಿಶ್ವಾಸವಂತೂ ಇದೆ ಎಂದು ಸಂಸದ ಪ್ರತಾಪಸಸ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.
ನನಗೆ ಟಿಕೆಟ್ ಸಿಗಲಿ ಬಿಡಲಿ, ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ನಾನು ಆಭಾರಿಯಾದ್ದೇನೆ. ಮೈಸೂರು, ಕೊಡಗು ಮಾತ್ರವಲ್ಲ ಕ್ಷೇತ್ರದಾಚೆಗೂ ಜನರು ನನಗೆ ಟಿಕೆಟ್ ಸಿಗುವಂತೆ ಆಗ್ರಹಿಸಿದ್ದಾರೆ. ನನ್ನ ಟಿಕೆಟ್ ವಿಚಾರದ ಸದ್ಯ ಟ್ರೆಂಡಿಂಗ್ ಆಗಿದೆ. ಇಂತಹ ಜನರ ಪ್ರೀತಿ ಗಳಿಸಿದ ನಾನು ನಿಜಕ್ಕೂ ಭಾಗ್ಯಶಾಲಿ ಎಂದು ತಿಳಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…