ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುತ್ತದೆಯೋ ಇಲ್ಲವೋ ಎಂಬ ಪ್ರಶ್ನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.
ಟಿಕೆಟ್ ಊಹಾಪೋಹಗಳಿಗೆ ಸೋಮವಾರ ತಡರಾತ್ರಿ ಫೇಸ್ ಬುಕ್ ಲೈವ್ನಲ್ಲಿ ಬಂದು ಕ್ಷೇತ್ರದ ಬಗ್ಗೆ ಹಾಗೂ ತಮ್ಮ ಪ್ರಗತಿ ಬಗ್ಗೆ ಮಾತನಾಡುತ್ತಾ ಭಾವುಕರಾಗಿದ್ದರು. ಇವೆಲ್ಲದರ ನಡುವೆ ಇಂದು (ಮಾ.೧೨) ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂಸದರು, ತಮಗೆ ಟಿಕೆಟ್ ಸಿಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ಕೈ ತಪ್ಪಿರುವುದು ಇನ್ನು ಖಚಿತವಾಗಿಲ್ಲ. ಸಿಈಸಿ ಸಭೆಯ ತೀರ್ಮಾನದ ಬಗ್ಗೆ ನನಗೆ ಮಾಹಿತಿಯಿಲ್ಲ. ಈವರೆಗೆ ಟಿಕೆಟ್ ಸಿಗದಿರುವ ಬಗ್ಗೆ ಅಧಿಕೃತ ಘೋಷಣೆಯಾಗದಿರುವ ಕಾರಣ ನನಗೆ ಖಚಿತವಾಗಿ ಟಿಕೆಟ್ ಸಿಗುವ ವಿಶ್ವಾಸವಂತೂ ಇದೆ ಎಂದು ಸಂಸದ ಪ್ರತಾಪಸಸ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.
ನನಗೆ ಟಿಕೆಟ್ ಸಿಗಲಿ ಬಿಡಲಿ, ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ನಾನು ಆಭಾರಿಯಾದ್ದೇನೆ. ಮೈಸೂರು, ಕೊಡಗು ಮಾತ್ರವಲ್ಲ ಕ್ಷೇತ್ರದಾಚೆಗೂ ಜನರು ನನಗೆ ಟಿಕೆಟ್ ಸಿಗುವಂತೆ ಆಗ್ರಹಿಸಿದ್ದಾರೆ. ನನ್ನ ಟಿಕೆಟ್ ವಿಚಾರದ ಸದ್ಯ ಟ್ರೆಂಡಿಂಗ್ ಆಗಿದೆ. ಇಂತಹ ಜನರ ಪ್ರೀತಿ ಗಳಿಸಿದ ನಾನು ನಿಜಕ್ಕೂ ಭಾಗ್ಯಶಾಲಿ ಎಂದು ತಿಳಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…