ಮೈಸೂರು: ಶನಿವಾರ ಇಲ್ಲಿ ನಡೆದ ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಗಾಗಿ ಚಿನ್ನದ ಅಂಬಾರಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುವಲ್ಲಿ ನಮ್ಮಿಂದ ವಿಳಂಬವಾಗಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಭಾನುವಾರ ಮಾದ್ಯಮ ಪ್ರಕಟಣೆ ನೀಡಿರುವ ಅವರು, ಮೆರವಣಿಗೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅಂದರೆ ಮಧ್ಯಾಹ್ನ 2.05ಕ್ಕೆ ಅಂಬಾರಿ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಂಬಾರಿಯು 2.05ಕ್ಕೆ ದೊರೆತ ಬಗ್ಗೆ ಅರಮನೆ ಕಾರ್ಯದರ್ಶಿ ಎಂ.ಲಕ್ಷ್ಮೀನಾರಾಯಣ್ ಅವರು ಅರಮನೆ ಭದ್ರತಾ ಪಡೆಯ ಎಸಿಪಿ ಚಂದ್ರಶೇಖರ್ ಅವರಿಂದ ಸ್ವೀಕೃತಿ ಪಡೆದಿರುವ ಪ್ರತಿಯನ್ನೂ ಪ್ರಕಟಣೆಯೊಂದಿಗೆ ಲಗತ್ತಿಸಿ, ಮೆರವಣಿಗೆಯ ಸಂದರ್ಭದಲ್ಲಿ ಅಭಿಮನ್ಯು ಆನೆಯು ಚಿನ್ನದ ಅಂಬಾರಿಯನ್ನು ಸಾಗಿಸುವಲ್ಲಿ ಹಾಗೂ ಮುಹೂರ್ತದೊಳಗೆ ಪುಷ್ಪಾರ್ಪಣೆ ಮಾಡಲು ಆಗಿರುವ ವಿಳಂಬಕ್ಕೆ ನಾವು ಕಾರಣವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಎಲ್ಲವನ್ನೂ ಸೂಕ್ಷ್ಮವಾಗಿ ನಿರ್ವಹಿಸಲು, ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಮತ್ತು ಅಂಬಾರಿ ಸಿದ್ಧವಾಗಿದ್ದರೂ, ಅದನ್ನು ಸ್ಥಳಾಂತರಿಸಲು ಸಂಬಂಧಿಸಿದ ಸಿಬ್ಬಂದಿಗೆ ತೊಂದರೆಯಾಯಿತು. ಜನಸಂದಣಿಯ ಕಳಪೆ ನಿರ್ವಹಣೆಯೂ ಇಲ್ಲಿ ಇಲ್ಲಿ ಇತ್ತು. ಕೆಲವು ಸರ್ಕಾರಿ ಕಾರು ಮತ್ತು ಸರ್ಕಾರಿ ಅತಿಥಿಗಳು ಹಾಗೂ ಪಾಲ್ಗೊಳ್ಳುವವರನ್ನು ಕರೆತಂದ ಖಾಸಗಿ ಬಸ್ ಅಂಬಾರಿ ಸಾಗುವ ಮಾರ್ಗದಲ್ಲಿ ನಿಲುಗಡೆ ಮಾಡಿದ್ದರಿಂದ ತೊಂದರೆಯಾಯಿತು ಎಂದಿದ್ದಾರೆ.
ಅಂಬಾರಿ ಹಸ್ತಾಂತರದ ಸಮಯದ ಬಗ್ಗೆ ಉಂಟಾಗಿರುವ ತಪ್ಪು ತಿಳಿವಳಿಕೆಯನ್ನು ಹೋಗಲಾಡಿಸಲು ಈ ಹೇಳಿಕೆ ನೀಡಿದ್ದೇನೆ. ಇದರಲ್ಲಿ ಯಾವುದೇ ಅಪರಾಧವಾಗಿಲ್ಲ ಎಂದು ಹೇಳಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…