ಮೈಸೂರು

ಅಂಬಾರಿ ಹಸ್ತಾಂತರ ವಿಳಂಬ ಆರೋಪ; ಪ್ರಮೋದಾದೇವಿ ಸ್ಪಷ್ಟನೆ

ಮೈಸೂರು: ಶನಿವಾರ ಇಲ್ಲಿ ನಡೆದ ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಗಾಗಿ ಚಿನ್ನದ ಅಂಬಾರಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುವಲ್ಲಿ ನಮ್ಮಿಂದ ವಿಳಂಬವಾಗಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಭಾನುವಾರ ಮಾದ್ಯಮ ಪ್ರಕಟಣೆ ನೀಡಿರುವ ಅವರು, ಮೆರವಣಿಗೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅಂದರೆ ಮಧ್ಯಾಹ್ನ 2.05ಕ್ಕೆ ಅಂಬಾರಿ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಂಬಾರಿಯು 2.05ಕ್ಕೆ ದೊರೆತ ಬಗ್ಗೆ ಅರಮನೆ ಕಾರ್ಯದರ್ಶಿ ಎಂ.ಲಕ್ಷ್ಮೀನಾರಾಯಣ್ ಅವರು ಅರಮನೆ ಭದ್ರತಾ ಪಡೆಯ ಎಸಿಪಿ ಚಂದ್ರಶೇಖರ್ ಅವರಿಂದ ಸ್ವೀಕೃತಿ ಪಡೆದಿರುವ ಪ್ರತಿಯನ್ನೂ ಪ್ರಕಟಣೆಯೊಂದಿಗೆ ಲಗತ್ತಿಸಿ, ಮೆರವಣಿಗೆಯ ಸಂದರ್ಭದಲ್ಲಿ ಅಭಿಮನ್ಯು ಆನೆಯು ಚಿನ್ನದ ಅಂಬಾರಿಯನ್ನು ಸಾಗಿಸುವಲ್ಲಿ ಹಾಗೂ ಮುಹೂರ್ತದೊಳಗೆ ಪುಷ್ಪಾರ್ಪಣೆ ಮಾಡಲು ಆಗಿರುವ ವಿಳಂಬಕ್ಕೆ ನಾವು ಕಾರಣವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಎಲ್ಲವನ್ನೂ ಸೂಕ್ಷ್ಮವಾಗಿ ನಿರ್ವಹಿಸಲು, ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಮತ್ತು ಅಂಬಾರಿ ಸಿದ್ಧವಾಗಿದ್ದರೂ, ಅದನ್ನು ಸ್ಥಳಾಂತರಿಸಲು ಸಂಬಂಧಿಸಿದ ಸಿಬ್ಬಂದಿಗೆ ತೊಂದರೆಯಾಯಿತು. ಜನಸಂದಣಿಯ ಕಳಪೆ ನಿರ್ವಹಣೆಯೂ ಇಲ್ಲಿ ಇಲ್ಲಿ ಇತ್ತು. ಕೆಲವು ಸರ್ಕಾರಿ ಕಾರು ಮತ್ತು ಸರ್ಕಾರಿ ಅತಿಥಿಗಳು ಹಾಗೂ ಪಾಲ್ಗೊಳ್ಳುವವರನ್ನು ಕರೆತಂದ ಖಾಸಗಿ ಬಸ್ ಅಂಬಾರಿ ಸಾಗುವ ಮಾರ್ಗದಲ್ಲಿ ನಿಲುಗಡೆ ಮಾಡಿದ್ದರಿಂದ ತೊಂದರೆಯಾಯಿತು ಎಂದಿದ್ದಾರೆ.

ಅಂಬಾರಿ ಹಸ್ತಾಂತರದ ಸಮಯದ ಬಗ್ಗೆ ಉಂಟಾಗಿರುವ ತಪ್ಪು ತಿಳಿವಳಿಕೆಯನ್ನು ಹೋಗಲಾಡಿಸಲು ಈ ಹೇಳಿಕೆ ನೀಡಿದ್ದೇನೆ. ಇದರಲ್ಲಿ ಯಾವುದೇ ಅಪರಾಧವಾಗಿಲ್ಲ ಎಂದು ಹೇಳಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

9 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

12 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

12 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

12 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

12 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

12 hours ago