ಮೈಸೂರು

ಅಂಬಾರಿ ಹಸ್ತಾಂತರ ವಿಳಂಬ ಆರೋಪ; ಪ್ರಮೋದಾದೇವಿ ಸ್ಪಷ್ಟನೆ

ಮೈಸೂರು: ಶನಿವಾರ ಇಲ್ಲಿ ನಡೆದ ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಗಾಗಿ ಚಿನ್ನದ ಅಂಬಾರಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುವಲ್ಲಿ ನಮ್ಮಿಂದ ವಿಳಂಬವಾಗಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಭಾನುವಾರ ಮಾದ್ಯಮ ಪ್ರಕಟಣೆ ನೀಡಿರುವ ಅವರು, ಮೆರವಣಿಗೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅಂದರೆ ಮಧ್ಯಾಹ್ನ 2.05ಕ್ಕೆ ಅಂಬಾರಿ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಂಬಾರಿಯು 2.05ಕ್ಕೆ ದೊರೆತ ಬಗ್ಗೆ ಅರಮನೆ ಕಾರ್ಯದರ್ಶಿ ಎಂ.ಲಕ್ಷ್ಮೀನಾರಾಯಣ್ ಅವರು ಅರಮನೆ ಭದ್ರತಾ ಪಡೆಯ ಎಸಿಪಿ ಚಂದ್ರಶೇಖರ್ ಅವರಿಂದ ಸ್ವೀಕೃತಿ ಪಡೆದಿರುವ ಪ್ರತಿಯನ್ನೂ ಪ್ರಕಟಣೆಯೊಂದಿಗೆ ಲಗತ್ತಿಸಿ, ಮೆರವಣಿಗೆಯ ಸಂದರ್ಭದಲ್ಲಿ ಅಭಿಮನ್ಯು ಆನೆಯು ಚಿನ್ನದ ಅಂಬಾರಿಯನ್ನು ಸಾಗಿಸುವಲ್ಲಿ ಹಾಗೂ ಮುಹೂರ್ತದೊಳಗೆ ಪುಷ್ಪಾರ್ಪಣೆ ಮಾಡಲು ಆಗಿರುವ ವಿಳಂಬಕ್ಕೆ ನಾವು ಕಾರಣವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಎಲ್ಲವನ್ನೂ ಸೂಕ್ಷ್ಮವಾಗಿ ನಿರ್ವಹಿಸಲು, ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಮತ್ತು ಅಂಬಾರಿ ಸಿದ್ಧವಾಗಿದ್ದರೂ, ಅದನ್ನು ಸ್ಥಳಾಂತರಿಸಲು ಸಂಬಂಧಿಸಿದ ಸಿಬ್ಬಂದಿಗೆ ತೊಂದರೆಯಾಯಿತು. ಜನಸಂದಣಿಯ ಕಳಪೆ ನಿರ್ವಹಣೆಯೂ ಇಲ್ಲಿ ಇಲ್ಲಿ ಇತ್ತು. ಕೆಲವು ಸರ್ಕಾರಿ ಕಾರು ಮತ್ತು ಸರ್ಕಾರಿ ಅತಿಥಿಗಳು ಹಾಗೂ ಪಾಲ್ಗೊಳ್ಳುವವರನ್ನು ಕರೆತಂದ ಖಾಸಗಿ ಬಸ್ ಅಂಬಾರಿ ಸಾಗುವ ಮಾರ್ಗದಲ್ಲಿ ನಿಲುಗಡೆ ಮಾಡಿದ್ದರಿಂದ ತೊಂದರೆಯಾಯಿತು ಎಂದಿದ್ದಾರೆ.

ಅಂಬಾರಿ ಹಸ್ತಾಂತರದ ಸಮಯದ ಬಗ್ಗೆ ಉಂಟಾಗಿರುವ ತಪ್ಪು ತಿಳಿವಳಿಕೆಯನ್ನು ಹೋಗಲಾಡಿಸಲು ಈ ಹೇಳಿಕೆ ನೀಡಿದ್ದೇನೆ. ಇದರಲ್ಲಿ ಯಾವುದೇ ಅಪರಾಧವಾಗಿಲ್ಲ ಎಂದು ಹೇಳಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

55 mins ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

57 mins ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

59 mins ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

1 hour ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

1 hour ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

1 hour ago