protest
ಮೈಸೂರು: ಮೈಸೂರು ವಿಶ್ವವಿದ್ಯಾನಿಯದ ಮಾನಸಗಂಗೋತ್ರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಪ್ರತಿಭಟನೆಯನ್ನು ಮಂದುವರೆಸಿದ್ದಾರೆ.
ಮಾನಸಗಂಗೋತ್ರಿಯ ಆವರಣದಲ್ಲಿ ಸಂಶೋಧಕರ ಸಂಘದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನದ ಅಂಗವಾಗಿ ಶುಭಕೋರಿ ಬ್ಯಾನರ್ ಅಳವಡಿಸಲಾಗಿತ್ತು. ಸಂಶೋಧಕರ ಸಂಘ ಹಾಗೂ ಯಾವುದೇ ವಿದ್ಯಾರ್ಥಿಗಳ ಗಮನಕ್ಕೂ ತಾರದೆ ಬುಧವಾರ ಸಂಜೆ ವಿಶ್ವವಿದ್ಯಾಲಯದ ಆಡಳಿತ ಸಿಬ್ಬಂದಿ ಬ್ಯಾನರ್ ತೆರವು ಮಾಡಿದ್ದರು. ವಿ.ವಿ ಆಡಳಿತ ದಲಿತ ವಿರೋಧಿ ಹಾಗೂ ಅಂಬೇಡ್ಕರ್ ವಿರೋಧಿ ಮನಸ್ಥಿತಿ ತೋರುತಿದೆ. ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ರಾತ್ರಿಯಿಡಿ ಪ್ರತಿಭಟಿಸಿದರು.
ಟಯರ್ ಸುಟ್ಟು ಆಕ್ರೋಶ
ತಡರಾತ್ರಿ ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಯ ಮುಖಂಡರು ಹಾಗೂ ವಿದ್ಯಾರ್ಥಿಗಳು ಬ್ಯಾನರ್ ತೆರವುಗೊಳಿಸಿದ್ದವರನ್ನು ಬಂಧಿಸಬೇಕು ಎಂದು ಜಯಲಕ್ಷ್ಮಿಪುರಂ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಕುಲಪತಿಗಳನ್ನು ವಜಾಗೊಳಿಸಿ
ಇನ್ನೂ ಗುರುವಾರ ಬೆಳಿಗ್ಗೆನಿಂದಲೇ ಕ್ಲಾಕ್ ಟವರ್ ಹಾಗೂ ವಿ.ವಿ ಪ್ರಮುಖ ಕಡೆಗಳಲ್ಲಿ ರಸ್ತೆ ತಡೆಗಟ್ಟಿ ಪ್ರತಿಭಟಿಸಿದರು. ರಾಜ್ಯಸರ್ಕಾರ ಕುಲಪತಿಗಳನ್ನು ವಜಾಗೊಳಸಿಬೇಕು. ಆಡಳಿತಾಧಿಕಾರಿ ರಾಮಚಂದ್ರ ಅವರನ್ನು ಅಮಾತನು ಮಾಡಬೇಕು. ಘಟನಾ ಸ್ಥಳಕ್ಕೆ ಬಾರದ ಕುಲಪತಿ, ಕುಲಸಚಿವರಿಗೆ ಧಿಕ್ಕಾರ ಎಂಬಿತ್ಯಾಧಿ ಘೋಷಣೆ ಕೋಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಗಿ ಬಂದೋಬಸ್ತ್
ಮಾನಸ ಗಂಗೋತ್ರಿ ಆವರಣದ ಸುತ್ತಲೂ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಆವರಣಕ್ಕೆ ಪ್ರವೇಶಿಸುವವರನ್ನು ಖುದ್ದು ಪೊಲೀಸರೇ ಪರಿಶೀಲಿಸಿ ವಿಶ್ವವಿದ್ಯಾಲಯದ ಆವರಣಕ್ಕೆ ಬಿಡುತ್ತಿದ್ದಾರೆ.
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…