ಮೈಸೂರು

ಮೈಸೂರು | ಅಂಬೇಡ್ಕರ್‌ ಬ್ಯಾನರ್‌ ತೆರವು : ವಿದ್ಯಾರ್ಥಿಗಳಿಂದ ಮುಂದುವರೆದ ಪ್ರತಿಭಟನೆ

ಮೈಸೂರು: ಮೈಸೂರು ವಿಶ್ವವಿದ್ಯಾನಿಯದ ಮಾನಸಗಂಗೋತ್ರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಪ್ರತಿಭಟನೆಯನ್ನು ಮಂದುವರೆಸಿದ್ದಾರೆ.

ಮಾನಸಗಂಗೋತ್ರಿಯ ಆವರಣದಲ್ಲಿ ಸಂಶೋಧಕರ ಸಂಘದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನದ ಅಂಗವಾಗಿ ಶುಭಕೋರಿ ಬ್ಯಾನರ್ ಅಳವಡಿಸಲಾಗಿತ್ತು. ಸಂಶೋಧಕರ ಸಂಘ ಹಾಗೂ ಯಾವುದೇ ವಿದ್ಯಾರ್ಥಿಗಳ ಗಮನಕ್ಕೂ ತಾರದೆ ಬುಧವಾರ ಸಂಜೆ ವಿಶ್ವವಿದ್ಯಾಲಯದ ಆಡಳಿತ ಸಿಬ್ಬಂದಿ ಬ್ಯಾನರ್‌ ತೆರವು ಮಾಡಿದ್ದರು. ವಿ.ವಿ ಆಡಳಿತ ದಲಿತ ವಿರೋಧಿ ಹಾಗೂ ಅಂಬೇಡ್ಕರ್ ವಿರೋಧಿ ಮನಸ್ಥಿತಿ ತೋರುತಿದೆ. ಅಂಬೇಡ್ಕರ್‌ ಭಾವಚಿತ್ರವನ್ನು ವಿರೂಪಗೊಳಿಸಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ರಾತ್ರಿಯಿಡಿ ಪ್ರತಿಭಟಿಸಿದರು.

ಟಯರ್‌ ಸುಟ್ಟು ಆಕ್ರೋಶ
ತಡರಾತ್ರಿ ಟಯರ್‌ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಯ ಮುಖಂಡರು ಹಾಗೂ ವಿದ್ಯಾರ್ಥಿಗಳು ಬ್ಯಾನರ್‌ ತೆರವುಗೊಳಿಸಿದ್ದವರನ್ನು ಬಂಧಿಸಬೇಕು ಎಂದು ಜಯಲಕ್ಷ್ಮಿಪುರಂ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ.

ಕುಲಪತಿಗಳನ್ನು ವಜಾಗೊಳಿಸಿ
ಇನ್ನೂ ಗುರುವಾರ ಬೆಳಿಗ್ಗೆನಿಂದಲೇ ಕ್ಲಾಕ್‌ ಟವರ್‌ ಹಾಗೂ ವಿ.ವಿ ಪ್ರಮುಖ ಕಡೆಗಳಲ್ಲಿ ರಸ್ತೆ ತಡೆಗಟ್ಟಿ ಪ್ರತಿಭಟಿಸಿದರು. ರಾಜ್ಯಸರ್ಕಾರ ಕುಲಪತಿಗಳನ್ನು ವಜಾಗೊಳಸಿಬೇಕು. ಆಡಳಿತಾಧಿಕಾರಿ ರಾಮಚಂದ್ರ ಅವರನ್ನು ಅಮಾತನು ಮಾಡಬೇಕು. ಘಟನಾ ಸ್ಥಳಕ್ಕೆ ಬಾರದ ಕುಲಪತಿ, ಕುಲಸಚಿವರಿಗೆ ಧಿಕ್ಕಾರ ಎಂಬಿತ್ಯಾಧಿ ಘೋಷಣೆ ಕೋಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಗಿ ಬಂದೋಬಸ್ತ್‌
ಮಾನಸ ಗಂಗೋತ್ರಿ ಆವರಣದ ಸುತ್ತಲೂ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಆವರಣಕ್ಕೆ ಪ್ರವೇಶಿಸುವವರನ್ನು ಖುದ್ದು ಪೊಲೀಸರೇ ಪರಿಶೀಲಿಸಿ ವಿಶ್ವವಿದ್ಯಾಲಯದ ಆವರಣಕ್ಕೆ ಬಿಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

4 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

5 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

6 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

6 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

6 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

6 hours ago