ಮೈಸೂರು

ಮೈಸೂರು | ಅಂಬೇಡ್ಕರ್‌ ಬ್ಯಾನರ್‌ ತೆರವು : ವಿದ್ಯಾರ್ಥಿಗಳಿಂದ ಮುಂದುವರೆದ ಪ್ರತಿಭಟನೆ

ಮೈಸೂರು: ಮೈಸೂರು ವಿಶ್ವವಿದ್ಯಾನಿಯದ ಮಾನಸಗಂಗೋತ್ರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಪ್ರತಿಭಟನೆಯನ್ನು ಮಂದುವರೆಸಿದ್ದಾರೆ.

ಮಾನಸಗಂಗೋತ್ರಿಯ ಆವರಣದಲ್ಲಿ ಸಂಶೋಧಕರ ಸಂಘದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನದ ಅಂಗವಾಗಿ ಶುಭಕೋರಿ ಬ್ಯಾನರ್ ಅಳವಡಿಸಲಾಗಿತ್ತು. ಸಂಶೋಧಕರ ಸಂಘ ಹಾಗೂ ಯಾವುದೇ ವಿದ್ಯಾರ್ಥಿಗಳ ಗಮನಕ್ಕೂ ತಾರದೆ ಬುಧವಾರ ಸಂಜೆ ವಿಶ್ವವಿದ್ಯಾಲಯದ ಆಡಳಿತ ಸಿಬ್ಬಂದಿ ಬ್ಯಾನರ್‌ ತೆರವು ಮಾಡಿದ್ದರು. ವಿ.ವಿ ಆಡಳಿತ ದಲಿತ ವಿರೋಧಿ ಹಾಗೂ ಅಂಬೇಡ್ಕರ್ ವಿರೋಧಿ ಮನಸ್ಥಿತಿ ತೋರುತಿದೆ. ಅಂಬೇಡ್ಕರ್‌ ಭಾವಚಿತ್ರವನ್ನು ವಿರೂಪಗೊಳಿಸಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ರಾತ್ರಿಯಿಡಿ ಪ್ರತಿಭಟಿಸಿದರು.

ಟಯರ್‌ ಸುಟ್ಟು ಆಕ್ರೋಶ
ತಡರಾತ್ರಿ ಟಯರ್‌ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಯ ಮುಖಂಡರು ಹಾಗೂ ವಿದ್ಯಾರ್ಥಿಗಳು ಬ್ಯಾನರ್‌ ತೆರವುಗೊಳಿಸಿದ್ದವರನ್ನು ಬಂಧಿಸಬೇಕು ಎಂದು ಜಯಲಕ್ಷ್ಮಿಪುರಂ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ.

ಕುಲಪತಿಗಳನ್ನು ವಜಾಗೊಳಿಸಿ
ಇನ್ನೂ ಗುರುವಾರ ಬೆಳಿಗ್ಗೆನಿಂದಲೇ ಕ್ಲಾಕ್‌ ಟವರ್‌ ಹಾಗೂ ವಿ.ವಿ ಪ್ರಮುಖ ಕಡೆಗಳಲ್ಲಿ ರಸ್ತೆ ತಡೆಗಟ್ಟಿ ಪ್ರತಿಭಟಿಸಿದರು. ರಾಜ್ಯಸರ್ಕಾರ ಕುಲಪತಿಗಳನ್ನು ವಜಾಗೊಳಸಿಬೇಕು. ಆಡಳಿತಾಧಿಕಾರಿ ರಾಮಚಂದ್ರ ಅವರನ್ನು ಅಮಾತನು ಮಾಡಬೇಕು. ಘಟನಾ ಸ್ಥಳಕ್ಕೆ ಬಾರದ ಕುಲಪತಿ, ಕುಲಸಚಿವರಿಗೆ ಧಿಕ್ಕಾರ ಎಂಬಿತ್ಯಾಧಿ ಘೋಷಣೆ ಕೋಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಗಿ ಬಂದೋಬಸ್ತ್‌
ಮಾನಸ ಗಂಗೋತ್ರಿ ಆವರಣದ ಸುತ್ತಲೂ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಆವರಣಕ್ಕೆ ಪ್ರವೇಶಿಸುವವರನ್ನು ಖುದ್ದು ಪೊಲೀಸರೇ ಪರಿಶೀಲಿಸಿ ವಿಶ್ವವಿದ್ಯಾಲಯದ ಆವರಣಕ್ಕೆ ಬಿಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago