ನಂಜನಗೂಡು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಆಚರಣೆ ಮಾಡಿದೆ ಎಂದು ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಶಂಕರಪುರ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂಜನಗೂಡು ನಗರದ ಚಾಮರಾಜನಗರ ಬೈಪಾಸ್ ರಸ್ತೆಯ ಹೃದಯ ಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಯ ಗೋಪುರವನ್ನು ಸ್ವಚ್ಛಗೊಳಿಸದೆ ಹಾಗೆಯೇ ಆಚರಣೆ ಮಾಡಲಾಗಿದೆ.
ಗೋಪುರವು ಧೂಳಿನಿಂದ ಕೂಡಿದ್ದು, ಹಕ್ಕಿ ಪಕ್ಷಿಗಳ ಹಿಕ್ಕೆ ಮತ್ತು ಧೂಳನ್ನು ಸ್ವಚ್ಛಗೊಳಿಸಿ, ಸುಣ್ಣ ಬಣ್ಣ ಬಳಿದು ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಬೇಕಿತ್ತು. ಆದರೆ, ಇದ್ಯಾವುದನ್ನು ಮಾಡದ ತಾಲ್ಲೂಕು ಆಡಳಿತ ತನ್ನ ಬೇಜವಾಬ್ದಾರಿ ತೋರಿದೆ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಗಿದ್ದು, ಅಂಬೇಡ್ಕರ್ ಅವರ ಪುತ್ಥಳಿ ಮತ್ತು ಗೋಪುರವನ್ನು ಸ್ವಚ್ಛಗೊಳಿಸದೆ ಹಾಗೆಯೇ ಆಚರಣೆ ಮಾಡಿದ್ದಾರೆ. ಯಾವುದೇ ಬಣ್ಣವನ್ನು ಬಳಿದಿಲ್ಲ. ಸಿಸಿ ಕ್ಯಾಮೆರಾಗಳು ಕಾರ್ಯ ನಿರ್ವಹಿಸುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಂಕರಪುರ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಘಟನೆ ತಿಳಿದು ಸ್ಥಳಕ್ಕಾಗಮಿಸಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಕ್ಷೇತ್ರದ ಮಾಜಿ ಶಾಸಕ ಬಿ ಹರ್ಷವರ್ಧನ್ ತರಾಟೆಗೆ ತೆಗೆದುಕೊಂಡು ನಂತರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…