ಮೈಸೂರು

ಅಂಬೇಡ್ಕರ್ ಪ್ರತಿಮೆ ಗೋಪುರ ಸ್ವಚ್ಛಗೊಳಿಸದೇ ಕಾಟಾಚಾರಕ್ಕೆ ಅಂಬೇಡ್ಕರ್ ಜಯಂತಿ ಆಚರಣೆ: ದಸಂಸ ಮುಖಂಡರ ಆಕ್ರೋಶ

ನಂಜನಗೂಡು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಆಚರಣೆ ಮಾಡಿದೆ ಎಂದು ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಶಂಕರಪುರ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂಜನಗೂಡು ನಗರದ ಚಾಮರಾಜನಗರ ಬೈಪಾಸ್ ರಸ್ತೆಯ ಹೃದಯ ಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಯ ಗೋಪುರವನ್ನು ಸ್ವಚ್ಛಗೊಳಿಸದೆ ಹಾಗೆಯೇ ಆಚರಣೆ ಮಾಡಲಾಗಿದೆ.

ಗೋಪುರವು ಧೂಳಿನಿಂದ ಕೂಡಿದ್ದು, ಹಕ್ಕಿ ಪಕ್ಷಿಗಳ ಹಿಕ್ಕೆ ಮತ್ತು ಧೂಳನ್ನು ಸ್ವಚ್ಛಗೊಳಿಸಿ, ಸುಣ್ಣ ಬಣ್ಣ ಬಳಿದು ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಬೇಕಿತ್ತು. ಆದರೆ, ಇದ್ಯಾವುದನ್ನು ಮಾಡದ ತಾಲ್ಲೂಕು ಆಡಳಿತ ತನ್ನ ಬೇಜವಾಬ್ದಾರಿ ತೋರಿದೆ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಗಿದ್ದು, ಅಂಬೇಡ್ಕರ್ ಅವರ ಪುತ್ಥಳಿ ಮತ್ತು ಗೋಪುರವನ್ನು ಸ್ವಚ್ಛಗೊಳಿಸದೆ ಹಾಗೆಯೇ ಆಚರಣೆ ಮಾಡಿದ್ದಾರೆ. ಯಾವುದೇ ಬಣ್ಣವನ್ನು ಬಳಿದಿಲ್ಲ. ಸಿಸಿ ಕ್ಯಾಮೆರಾಗಳು ಕಾರ್ಯ ನಿರ್ವಹಿಸುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಂಕರಪುರ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಘಟನೆ ತಿಳಿದು ಸ್ಥಳಕ್ಕಾಗಮಿಸಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಕ್ಷೇತ್ರದ ಮಾಜಿ ಶಾಸಕ ಬಿ ಹರ್ಷವರ್ಧನ್ ತರಾಟೆಗೆ ತೆಗೆದುಕೊಂಡು ನಂತರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

11 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

11 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

11 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

11 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

11 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

11 hours ago