ಮೈಸೂರು

ಸಮಾನತೆಗೆ ಅನನ್ಯ ಕೊಡುಗೆ ನೀಡಿದ ಅಂಬೇಡ್ಕರ್‌ : ಶಾಸಕ ರಮೇಶ್‌ ಬಂಡಿಸಿದ್ದೇಗೌಡ

– ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಅಂಬೇಡ್ಕರ್‌ ಜಯಂತಿ

ಮೈಸೂರು:  ದೇಶದಲ್ಲಿನ ಪ್ರತಿಯೊಬ್ಬರಿಗೂ ಸಾಮಾಜಿಕ ಸಮಾನತೆ ಕಲ್ಪಿಸುವಲ್ಲಿ ಅಂಬೇಡ್ಕರ್‌ ಕೊಡುಗೆ ಅಪಾರವಾಗಿದೆ. ಹೀಗಾಗಗಗಿ, ಅವರ ಚಿಂತನೆಗಳನ್ನು ನಾವೆಲ್ಲಾ ಪಾಲಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿದರು.

ನಗರದ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ 134ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ದೇಶದ ಜನರಿಗೆ ಭದ್ರ ಬುನಾದಿ ಹಾಕಿಕೊಡಲು ಪ್ರಪಂಚದಾದ್ಯಂತ ಸಂಚರಿಸಿ, ಅಪಾರವಾದ ಅಧ್ಯಯನವನ್ನು ನಡೆಸಿದ ಅಂಬೇಡ್ಕರ್‌ ಅವರು ಭಾರತೀಯರಿಗೆ ಶ್ರೇಷ್ಠ ಸಂವಿಧಾನ ನೀಡಿದರು. ಆ ಮೂಲಕ ಪ್ರತಿಯೊಬ್ಬರಿಗೂ ಸಮಾನತೆ, ವಾಕ್ ಸ್ವಾತಂತ್ರ್ಯ ಕಲ್ಪಿಸಿದ್ದಾರೆ. ಅಂಬೇಡ್ಕರ್‌ ಅವರ ದೀರ್ಘಕಾಲದ ಅಧ್ಯಯನ, ಅನೇಕ ವಿಚಾರಗಳು ಇಂದಿಗೂ ಜೀವಂತವಾಗಿದ್ದು, ಅವರ ಚಿಂತನೆಗಳು, ವಿಚಾರಗಳನ್ನು ನಾವುಗಳು ಜೀವನದಲ್ಲಿ ಪಾಲನೆ ಮಾಡಬೇಕಿದೆ” ಎಂದು ಸಲಹೆ ನೀಡಿದರು.

ಸೆಸ್ಕ್‌ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಮಾತನಾಡಿ, “ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಇಡೀ ವಿಶ್ವವೇ ಮೆಚ್ಚುವ ಶ್ರೇಷ್ಠ ಸಂವಿಧಾನವನ್ನು ಭಾರತೀಯರಿಗೆ ನೀಡಿದ್ದಾರೆ. ಅಂಬೇಡ್ಕರ್‌ ಅವರು ಭಾರತ ಕಂಡ ಅತ್ಯುನ್ನತ ಹಾಗೂ ಮಾನವರಿಗೆ ಸಮಾನತೆ  ಸಾರಿದ್ದಾರೆ. ಅವರ ಜನ್ಮದಿನವನ್ನು ವಿಶ್ವ ಜ್ಞಾನ ದಿನವನ್ನಾಗಿಯೂ ಆಚರಿಸಲಾಗುತ್ತಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸೆಸ್ಕ್ ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕರು(ತಾಂತ್ರಿಕ ಶಾಖೆ) ಶರಣಮ್ಮ ಎಸ್‌. ಜಂಗಿನ್‌, ಪ್ರಧಾನ ವ್ಯವಸ್ಥಾಪಕರು(ಆ ಮತ್ತು ಮಾ. ಸಂ) ಬಿ.ಆರ್. ರೂಪ‌, ಮುಖ್ಯ ಪ್ರಧಾನ ವ್ಯವಸ್ಥಾಪಕರು(ಆಂತರಿಕ ಪರಿಶೋಧನೆ) ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರು(ಖರೀದಿ) ಎಲ್‌. ಲೋಕೇಶ್‌ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

34 mins ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

36 mins ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

38 mins ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

47 mins ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

50 mins ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

55 mins ago