ಮೈಸೂರು

ಅಂಬೇಡ್ಕರ್‌ ಸ್ಮರಣೆಯೇ ಬೆಳಕು: ಪ್ರೊ.ಶಶಿಕಲಾ

ಮೈಸೂರು:ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಸ್ಮರಿಸುವುದು ಬೆಳಕಿನ ಕಡೆ ನಡೆಯುವುದು ಎಂಬರ್ಥ ಎಂದು ಮಾನಸಗಂಗೋತ್ರಿಯ ಜೈನಶಾಸ್ತ್ರ ವಿಭಾಗದ ನಿರ್ದೇಶಕಿ ಪ್ರೊ.ಎಸ್.ಡಿ.ಶಶಿಕಲಾ ಅಭಿಪ್ರಾಯ ಪಟ್ಟರು.

ಶುಕ್ರವಾರ ಅರಿವು ಸಂಶೋಧನಾ ವಿದ್ಯಾರ್ಥಿ ವೇದಿಕೆ ವತಿಯಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ “ಅಂಬೇಡ್ಕರ್ ಅವರ 68ನೇ ಪರಿನಿಬ್ಬಾಣ ದಿನ’ ಕಾರ್ಯಕ್ರದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಕಟ್ಟಿಕೊಟ್ಟ ಸಂವಿಧಾನದಿಂದ ಮಹಿಳೆಯರು ಸ್ವಾವಲಂಬಿಗಳಾಗಿದ್ದಾರೆ. ಸಂವಿಧಾನದ ನ್ಯಾಯಯುತ ಜಾರಿ ಆಗಬೇಕಿದೆ. ಅಂಬೇಡ್ಕರ್ ಅವರ ಸೈದ್ದಾಂತಿಕ ನೆಲೆಯಲ್ಲಿ ಸಮಾಜ ಕಟ್ಟಬೇಕಿದೆ. ಬೌದ್ಧ ಧರ್ಮದ ಸತ್ಯ ಪಾಲನೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಪ್ರೊ.ಎನ್.ಕೆ.ಲೋಲಾಕ್ವಿ, ದೀಪವನ್ನು ಹಚ್ಚುವ ಮೂಲಕ ಅಂಬೇಡ್ಕರ್ ಅವರನ್ನು ಮತ್ತೆ ಮತ್ತೆ ನಮ್ಮೊಳಗೆ ಬೆಳಕಾಗಿ ರೂಪಿಸಿಕೊಳ್ಳಬೇಕಿದೆ. ಅಂಬೇಡ್ಕರ್ ಅವರ ಸಂವಿಧಾನ ಭಾರತದ ಎಲ್ಲರಿಗಾಗಿ ಎಂಬುದನ್ನು ನೆನಪಿಸಿಕೊಳ್ಳಬೇಕಿದೆ. ಅಂಬೇಡ್ಕರ್ ಅವರು ತಮ್ಮ ಆರೋಗ್ಯಕ್ಕಿಂತ ದೇಶದ ಆರೋಗ್ಯ ಮುಖ್ಯವಾಗಿಸಿಕೊಂಡು, ದೇಶವನ್ನು ಕಟ್ಟಲು ತಮ್ಮ ಆರೋಗ್ಯವನ್ನು ನೀಡಿದರು. ಶರಣರ ಸಾವನ್ನು ಮರಣದಲ್ಲಿ ಕಾಣು ಎಂಬಂತೆ ನಾವು ಅಂಬೇಡ್ಕರ್ ಅವರ ನಿಬ್ಬಾಣವನ್ನು ಅರ್ಥ ಮಾಡಿಕೊಳ್ಳೋಣ ಎಂದು ಸಲಹೆ ನೀಡಿದರು.

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವ್ಯವಸ್ಥಾಪನಾ ಕಾರ್ಯಧಿಕಾರಿ ಹೇಮಲತಾ, ಕುವೆಂಪು ಕನ್ನಡ ವಿಭಾಗದ ಉಪನ್ಯಾಸಕ ಸಿಬ್ಬಂದಿಗಳಾದ ತಲಕಾಡು ನಾಗರಾಜು, ನಂಜುಂಡಸ್ವಾಮಿ, ಸುರೇಶ್, ಶೈಲಾಜ, ಮಂಜುನಾಥ್, ಪ್ರಸನ್ನ, ವಿಭಾಗ ಬೋಧಕೇತರ ಸಿಬ್ಬಂದಿಗಳಾದ ಮೂರ್ತಿ, ಪಿ.ಎಂ.ಕುಮಾರ್, ಯೋಗೀಶ್, ನಾಗಮಣಿ, ಸಂಶೋಧನಾ ವಿದ್ಯಾರ್ಥಿಗಳಾ ಮೇಘ, ದಿವ್ಯಾ, ಮಹದೇವಮ್ಮ, ತೀರ್ಥ ಪ್ರಸಾದ್, ಪ್ರಸಾದ್, ಪ್ರತಾಪ್, ನಟರಾಜು, ಹನುಮಂತಪ್ಪ, ದಿಲೀಪ್ ಹಾಗೂ ಸ್ನಾತಕೊತ್ತರ ವಿದ್ಯಾರ್ಥಿಗಳು  ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…

15 mins ago

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

1 hour ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

2 hours ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

2 hours ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

3 hours ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

3 hours ago