ಮೈಸೂರು

ಅಂಬೇಡ್ಕರ್‌ ಸ್ಮರಣೆಯೇ ಬೆಳಕು: ಪ್ರೊ.ಶಶಿಕಲಾ

ಮೈಸೂರು:ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಸ್ಮರಿಸುವುದು ಬೆಳಕಿನ ಕಡೆ ನಡೆಯುವುದು ಎಂಬರ್ಥ ಎಂದು ಮಾನಸಗಂಗೋತ್ರಿಯ ಜೈನಶಾಸ್ತ್ರ ವಿಭಾಗದ ನಿರ್ದೇಶಕಿ ಪ್ರೊ.ಎಸ್.ಡಿ.ಶಶಿಕಲಾ ಅಭಿಪ್ರಾಯ ಪಟ್ಟರು.

ಶುಕ್ರವಾರ ಅರಿವು ಸಂಶೋಧನಾ ವಿದ್ಯಾರ್ಥಿ ವೇದಿಕೆ ವತಿಯಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ “ಅಂಬೇಡ್ಕರ್ ಅವರ 68ನೇ ಪರಿನಿಬ್ಬಾಣ ದಿನ’ ಕಾರ್ಯಕ್ರದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಕಟ್ಟಿಕೊಟ್ಟ ಸಂವಿಧಾನದಿಂದ ಮಹಿಳೆಯರು ಸ್ವಾವಲಂಬಿಗಳಾಗಿದ್ದಾರೆ. ಸಂವಿಧಾನದ ನ್ಯಾಯಯುತ ಜಾರಿ ಆಗಬೇಕಿದೆ. ಅಂಬೇಡ್ಕರ್ ಅವರ ಸೈದ್ದಾಂತಿಕ ನೆಲೆಯಲ್ಲಿ ಸಮಾಜ ಕಟ್ಟಬೇಕಿದೆ. ಬೌದ್ಧ ಧರ್ಮದ ಸತ್ಯ ಪಾಲನೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಪ್ರೊ.ಎನ್.ಕೆ.ಲೋಲಾಕ್ವಿ, ದೀಪವನ್ನು ಹಚ್ಚುವ ಮೂಲಕ ಅಂಬೇಡ್ಕರ್ ಅವರನ್ನು ಮತ್ತೆ ಮತ್ತೆ ನಮ್ಮೊಳಗೆ ಬೆಳಕಾಗಿ ರೂಪಿಸಿಕೊಳ್ಳಬೇಕಿದೆ. ಅಂಬೇಡ್ಕರ್ ಅವರ ಸಂವಿಧಾನ ಭಾರತದ ಎಲ್ಲರಿಗಾಗಿ ಎಂಬುದನ್ನು ನೆನಪಿಸಿಕೊಳ್ಳಬೇಕಿದೆ. ಅಂಬೇಡ್ಕರ್ ಅವರು ತಮ್ಮ ಆರೋಗ್ಯಕ್ಕಿಂತ ದೇಶದ ಆರೋಗ್ಯ ಮುಖ್ಯವಾಗಿಸಿಕೊಂಡು, ದೇಶವನ್ನು ಕಟ್ಟಲು ತಮ್ಮ ಆರೋಗ್ಯವನ್ನು ನೀಡಿದರು. ಶರಣರ ಸಾವನ್ನು ಮರಣದಲ್ಲಿ ಕಾಣು ಎಂಬಂತೆ ನಾವು ಅಂಬೇಡ್ಕರ್ ಅವರ ನಿಬ್ಬಾಣವನ್ನು ಅರ್ಥ ಮಾಡಿಕೊಳ್ಳೋಣ ಎಂದು ಸಲಹೆ ನೀಡಿದರು.

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವ್ಯವಸ್ಥಾಪನಾ ಕಾರ್ಯಧಿಕಾರಿ ಹೇಮಲತಾ, ಕುವೆಂಪು ಕನ್ನಡ ವಿಭಾಗದ ಉಪನ್ಯಾಸಕ ಸಿಬ್ಬಂದಿಗಳಾದ ತಲಕಾಡು ನಾಗರಾಜು, ನಂಜುಂಡಸ್ವಾಮಿ, ಸುರೇಶ್, ಶೈಲಾಜ, ಮಂಜುನಾಥ್, ಪ್ರಸನ್ನ, ವಿಭಾಗ ಬೋಧಕೇತರ ಸಿಬ್ಬಂದಿಗಳಾದ ಮೂರ್ತಿ, ಪಿ.ಎಂ.ಕುಮಾರ್, ಯೋಗೀಶ್, ನಾಗಮಣಿ, ಸಂಶೋಧನಾ ವಿದ್ಯಾರ್ಥಿಗಳಾ ಮೇಘ, ದಿವ್ಯಾ, ಮಹದೇವಮ್ಮ, ತೀರ್ಥ ಪ್ರಸಾದ್, ಪ್ರಸಾದ್, ಪ್ರತಾಪ್, ನಟರಾಜು, ಹನುಮಂತಪ್ಪ, ದಿಲೀಪ್ ಹಾಗೂ ಸ್ನಾತಕೊತ್ತರ ವಿದ್ಯಾರ್ಥಿಗಳು  ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

7 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

7 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

7 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

8 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

8 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

8 hours ago