ಮೈಸೂರು

ವಾಜಮಂಗಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ವಿರೂಪ: ಸ್ಥಳದಲ್ಲಿ‌ ಬಿಗುವಿನ ವಾತಾವರಣ

ಮೈಸೂರು: ಮಹಾನ್ ಮಾನವತಾವಾದಿ, ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಅಳವಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ, ಫ್ಲೆಕ್ಸ್‌ಗಳನ್ನು ವಿರೂಪಗಳಿಸಿ ನೀಲಿ ಧ್ವಜಗಳನ್ನು ಹರಿದು ವಿಕೃತಿ ಮೆರೆದಿರುವ ದುರ್ಘಟನೆ ಜರುಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣಾ ವ್ಯಾಪ್ತಿಗೆ ಬರುವ ವಾಜಮಂಗಲದಲ್ಲಿ ಈ ಕೃತ್ಯ ನಡೆದಿದ್ದು, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.

ಏಪ್ರಿಲ್‌.14 ರಂದು ಇಲ್ಲಿನ ಸಿದ್ಧಾರ್ಥ ಯುವಕರ ಸಂಘವು ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸಿ, ಮೆರವಣಿಗೆ, ಅನ್ನದಾನ ಕಾರ್ಯಕ್ರಮ ಆಯೋಜನೆ ಮಾಡಿತ್ತು.

ಈ ಹಿನ್ನೆಲೆಯಲ್ಲಿ ರಸ್ತೆಯ ಅಕ್ಕಪಕ್ಕದಲ್ಲಿ ಹಾಗೂ ಗ್ರಾಮದ ಒಳಗಡೆ ಅಳವಡಿಸಿದ್ದ ಅಂಬೇಡ್ಕರ್ ಅವರ ಫ್ಲೆಕ್ಸ್, ಕಟೌಟ್‌ಗಳನ್ನು ಹರಿದು ವಿಕೃತ ಮೆರೆಯಲಾಗಿದ್ದು, ನೀಲಿ‌ ಧ್ವಜಗಳನ್ನು ಹರಿದು ಹಾಕಲಾಗಿದೆ.

ಇದನ್ನೂ ಓದಿ:- ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್:‌ ಕೂದಲೆಳೆ ಅಂತರದಲ್ಲಿ ಪಾರು

ಗ್ರಾಮದ ದಲಿತ ಮುಖಂಡರು ಭಾವಚಿತ್ರ ವಿರೂಪಗೊಳಿಸಿದವರನ್ನು ಬಂಧಿಸುವಂತೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಅಂಬೇಡ್ಕರ್‌ ಅವರ ಭಾವಚಿತ್ರ ವಿರೂಪಗೊಳಿಸಿರುವವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

ಇನ್ನು ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

38 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago