ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಅವರನ್ನು ಶಾಸಕ ಎಸ್.ಎ. ರಾಮದಾಸ್ ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮೈಸೂರು ನಗರ ಕಾರ್ಯಧ್ಯಕ್ಷ ಹೆಚ್.ಜಿ. ಗಿರಿಧರ್, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಮೇಯರ್ ಶಿವಕುಮಾರ್ ಮತ್ತಿತರರು ಇದ್ದರು.
ಈ ವೇಳೆ ಶಾಸಕ ಎಸ್.ಎ.ರಾಮದಾಸ್ ಅವರನ್ನು ಆತ್ಮೀಯವಾಗಿ ಆಲಂಗಿಸಿಕೊಂಡ ಅಮೀತ್ ಶಾ, ಹೇಗಿದ್ದೀರಿ? ಚೆನ್ನಾಗಿದ್ದೀರಾ? ಎಂದು ಕುಶಲೋಪರಿ ವಿಚಾರಿಸಿ, ಬೆನ್ನು ತಟ್ಟಿದರು. ಬಳಿಕ ನನ್ನ ಜೊತೆ ಬನ್ನಿ ಎಂದು ಎಸ್.ಎ.ರಾಮದಾಸ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಅವರು ಶಾ ಅವರನ್ನು ಸ್ವಾಗತಿಸಿ ದೇವಸ್ಥಾನದೊಳಗೆ ಕರೆದುಕೊಂಡು ಹೋಗಿ ದೇವರ ದರ್ಶನ ಮಾಡಿಸಿದರು. ಸುಮಾರು 15 ನಿಮಿಷಗಳ ಕಾಲ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ ಅವರು, ಪ್ರಾರ್ಥನೆಯನ್ನು ಸಲ್ಲಿಸಿದರು.
ಬಳಿಕ ಅಲ್ಲಿಂದ ಮತ್ತೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣಕ್ಕೆ ತೆರಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…