ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಅವರನ್ನು ಶಾಸಕ ಎಸ್.ಎ. ರಾಮದಾಸ್ ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮೈಸೂರು ನಗರ ಕಾರ್ಯಧ್ಯಕ್ಷ ಹೆಚ್.ಜಿ. ಗಿರಿಧರ್, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಮೇಯರ್ ಶಿವಕುಮಾರ್ ಮತ್ತಿತರರು ಇದ್ದರು.
ಈ ವೇಳೆ ಶಾಸಕ ಎಸ್.ಎ.ರಾಮದಾಸ್ ಅವರನ್ನು ಆತ್ಮೀಯವಾಗಿ ಆಲಂಗಿಸಿಕೊಂಡ ಅಮೀತ್ ಶಾ, ಹೇಗಿದ್ದೀರಿ? ಚೆನ್ನಾಗಿದ್ದೀರಾ? ಎಂದು ಕುಶಲೋಪರಿ ವಿಚಾರಿಸಿ, ಬೆನ್ನು ತಟ್ಟಿದರು. ಬಳಿಕ ನನ್ನ ಜೊತೆ ಬನ್ನಿ ಎಂದು ಎಸ್.ಎ.ರಾಮದಾಸ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಅವರು ಶಾ ಅವರನ್ನು ಸ್ವಾಗತಿಸಿ ದೇವಸ್ಥಾನದೊಳಗೆ ಕರೆದುಕೊಂಡು ಹೋಗಿ ದೇವರ ದರ್ಶನ ಮಾಡಿಸಿದರು. ಸುಮಾರು 15 ನಿಮಿಷಗಳ ಕಾಲ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ ಅವರು, ಪ್ರಾರ್ಥನೆಯನ್ನು ಸಲ್ಲಿಸಿದರು.
ಬಳಿಕ ಅಲ್ಲಿಂದ ಮತ್ತೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣಕ್ಕೆ ತೆರಳಿದರು.
ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…