ಮೈಸೂರು : ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೋಮದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಈ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ ಎಂದರು.
ನಂತರ ಡಿಸೆಂಬರ್ 19ರಂದು ನಾನು ಖುದ್ದು ಪ್ರಧಾನ ಮಂತ್ರಿಗಳನ್ನು ಹಾಗೂ 20ರಂದು ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ತಿಳಿಸಿದ್ದೇನೆ. ಡಿಸೆಂಬರ್ 23ಕ್ಕೆ ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಶಾ ಅವರು ತಿಳಿಸಿದ್ದರು.
ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ. ದೇಶದ ಗೃಹ ಸಚಿವರಾದ ಅಮಿತ್ ಶಾ ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಸೂಕ್ತ ದಾಖಲಾತಿ ಗಳೊಂದಿಗೆ ನಿರೂಪಿಸಲು ಸಿದ್ಧವಿದ್ದು, ಕೇಂದ್ರದ ಈ ಧೋರಣೆಯನ್ನು ಪ್ರಶ್ನಿಸಿ, ನ್ಯಾಯಾಲಯದ ಕದವನ್ನೂ ತಟ್ಟಲಾಗಿದೆ ಎಂದರು.
ದೇಶದ ವಿವಿಧೆಡೆಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು ಕೇಂದ್ರಕ್ಕೆ ನೀಡಲಾಗಿರುತ್ತದೆ. ಎನ್ ಡಿ ಆರ್ ಎಫ್ ಹಣ ರಾಜ್ಯಗಳಿಗೆ ಸೇರಿದ್ದು. ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದರು
ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…
ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…