Categories: ಮೈಸೂರು

ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ : ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು : ಸಿಎಂ

ಮೈಸೂರು : ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೋಮದಿಗೆ ಮಾತನಾಡಿದ ಅವರು,  ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಈ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ ಎಂದರು.

ನಂತರ ಡಿಸೆಂಬರ್ 19ರಂದು ನಾನು ಖುದ್ದು ಪ್ರಧಾನ ಮಂತ್ರಿಗಳನ್ನು ಹಾಗೂ 20ರಂದು ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ತಿಳಿಸಿದ್ದೇನೆ. ಡಿಸೆಂಬರ್ 23ಕ್ಕೆ ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಶಾ ಅವರು ತಿಳಿಸಿದ್ದರು.

ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ. ದೇಶದ ಗೃಹ ಸಚಿವರಾದ ಅಮಿತ್ ಶಾ ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಸೂಕ್ತ ದಾಖಲಾತಿ ಗಳೊಂದಿಗೆ ನಿರೂಪಿಸಲು ಸಿದ್ಧವಿದ್ದು, ಕೇಂದ್ರದ ಈ ಧೋರಣೆಯನ್ನು ಪ್ರಶ್ನಿಸಿ, ನ್ಯಾಯಾಲಯದ ಕದವನ್ನೂ ತಟ್ಟಲಾಗಿದೆ ಎಂದರು.

ದೇಶದ ವಿವಿಧೆಡೆಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು ಕೇಂದ್ರಕ್ಕೆ ನೀಡಲಾಗಿರುತ್ತದೆ. ಎನ್ ಡಿ ಆರ್ ಎಫ್ ಹಣ ರಾಜ್ಯಗಳಿಗೆ ಸೇರಿದ್ದು. ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago