ಮೈಸೂರು : ದಕ್ಷಿಣಕಾಶಿ ನಂಜನಗೂಡು ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಅನುಷ್ಟಾನಿಸಿರುವ ಅಮೃತ ಸರೋವರ ಕೆರೆಗಳ ದಂಡೆಯಲಿ ಧ್ವಜಾರೋಹಣ ನೆರವೇರಿಸುವ ಮೂಲಕ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ.
ಬಿಳಿಗೆರೆ ಗ್ರಾಮ ಪಂಚಾಯಿತಿಯ ಕಾಮಹಳ್ಳಿ ಕೆರೆ , ಮಲ್ಲೂಪುರ ಗ್ರಾಮ ಪಂಚಾಯಿತಿಯ ಸೋನಹಳ್ಳಿ ಕೆರೆ, ಕೋಣನೂರು ಗ್ರಾಮ ಪಂಚಾಯಿತಿಯ ಪಿ.ಮರಹಳ್ಳಿ ಒಟ್ಟರಕಟ್ಟೆ ಹಾಗೂ ಶಿರಮಳ್ಳಿ ಗ್ರಾಮ ಪಂಚಾಯಿತಿಯ ಹುಸ್ಕೂರು ಚಿಕ್ಕ ಕೆರೆ ದಂಡೆಯಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಧ್ವಜಾರೋಹಣ ನೆರವೇರಿಸಿದರು.
ಮಲ್ಲೂಪುರ ಗ್ರಾಮ ಪಂಚಾಯಿತಿಯ ಸೋನಹಳ್ಳಿ ಅಮೃತ ಸರೋವರ ಕೆರೆ ದಂಡೆಯಲಿ ಧ್ಜಜಾರೋಹಣ ನೆರವೇರಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೋಮಲ ಅವರು ಮಾತನಾಡಿದರು. ಸರ್ಕಾರದ ಪ್ರತಿಷ್ಟಿತ ಯೋಜನೆಗಳಲ್ಲಿ ಒಂದಾದ ನರೇಗಾ ಯೋಜನೆ ಅಡಿ ಗ್ರಾಮದಲ್ಲಿ ಅಮೃತ ಸರೋವರ ಕೆರೆ ಅನುಷ್ಟಾನಗೊಂಡಿರುವುದು ಜನ-ಜಾನುವಾರುಗಳಿಗೆ ಅನುಕೂಲಕರವಾಗಲಿದೆ. ಜೊತೆಗೆ ಈ ಭಾಗದ ರೈತರಿಗೂ ಅನುಕೂಲವಾಗಲಿದ್ದು, ಸುತ್ತಮುತ್ತಲಿನ ಜಮೀನುಗಳು ಸಮೃದ್ಧಗೊಳ್ಳಲು ನೆರವಾಗಲಿದೆ. ಇಂತಹ ಕೆರೆ ದಂಡೆಯಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿರುವುದು ಹೆಮ್ಮೆಯ ವಿಷಯವಾಗಿದೆ. ನರೇಗಾ ಯೋಜನೆ ಅಡಿ ಇನ್ನಷ್ಟು ಕೆರೆ-ಕಟ್ಟೆಗಳು ಅಭಿವೃದ್ಧಿಗೊಳ್ಳಲಿ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಶಾಲಾ ಶಿಕ್ಷರು, ಐ.ಇ.ಸಿ ಸಂಯೋಜಕರು, ತಾಂತ್ರಿಕ ಸಹಾಯಕ ಇಂಜಿನಿಯರ್ ಗಳು, ಬಿ.ಎಫ್.ಟಿ ಗಳು, ಪಂಚಾಯಿತಿ ಇತರೆ ಸಿಬ್ಬಂದಿ ಸೇರಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…