ಮೈಸೂರು : ದಕ್ಷಿಣಕಾಶಿ ನಂಜನಗೂಡು ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಅನುಷ್ಟಾನಿಸಿರುವ ಅಮೃತ ಸರೋವರ ಕೆರೆಗಳ ದಂಡೆಯಲಿ ಧ್ವಜಾರೋಹಣ ನೆರವೇರಿಸುವ ಮೂಲಕ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ.
ಬಿಳಿಗೆರೆ ಗ್ರಾಮ ಪಂಚಾಯಿತಿಯ ಕಾಮಹಳ್ಳಿ ಕೆರೆ , ಮಲ್ಲೂಪುರ ಗ್ರಾಮ ಪಂಚಾಯಿತಿಯ ಸೋನಹಳ್ಳಿ ಕೆರೆ, ಕೋಣನೂರು ಗ್ರಾಮ ಪಂಚಾಯಿತಿಯ ಪಿ.ಮರಹಳ್ಳಿ ಒಟ್ಟರಕಟ್ಟೆ ಹಾಗೂ ಶಿರಮಳ್ಳಿ ಗ್ರಾಮ ಪಂಚಾಯಿತಿಯ ಹುಸ್ಕೂರು ಚಿಕ್ಕ ಕೆರೆ ದಂಡೆಯಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಧ್ವಜಾರೋಹಣ ನೆರವೇರಿಸಿದರು.
ಮಲ್ಲೂಪುರ ಗ್ರಾಮ ಪಂಚಾಯಿತಿಯ ಸೋನಹಳ್ಳಿ ಅಮೃತ ಸರೋವರ ಕೆರೆ ದಂಡೆಯಲಿ ಧ್ಜಜಾರೋಹಣ ನೆರವೇರಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೋಮಲ ಅವರು ಮಾತನಾಡಿದರು. ಸರ್ಕಾರದ ಪ್ರತಿಷ್ಟಿತ ಯೋಜನೆಗಳಲ್ಲಿ ಒಂದಾದ ನರೇಗಾ ಯೋಜನೆ ಅಡಿ ಗ್ರಾಮದಲ್ಲಿ ಅಮೃತ ಸರೋವರ ಕೆರೆ ಅನುಷ್ಟಾನಗೊಂಡಿರುವುದು ಜನ-ಜಾನುವಾರುಗಳಿಗೆ ಅನುಕೂಲಕರವಾಗಲಿದೆ. ಜೊತೆಗೆ ಈ ಭಾಗದ ರೈತರಿಗೂ ಅನುಕೂಲವಾಗಲಿದ್ದು, ಸುತ್ತಮುತ್ತಲಿನ ಜಮೀನುಗಳು ಸಮೃದ್ಧಗೊಳ್ಳಲು ನೆರವಾಗಲಿದೆ. ಇಂತಹ ಕೆರೆ ದಂಡೆಯಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿರುವುದು ಹೆಮ್ಮೆಯ ವಿಷಯವಾಗಿದೆ. ನರೇಗಾ ಯೋಜನೆ ಅಡಿ ಇನ್ನಷ್ಟು ಕೆರೆ-ಕಟ್ಟೆಗಳು ಅಭಿವೃದ್ಧಿಗೊಳ್ಳಲಿ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಶಾಲಾ ಶಿಕ್ಷರು, ಐ.ಇ.ಸಿ ಸಂಯೋಜಕರು, ತಾಂತ್ರಿಕ ಸಹಾಯಕ ಇಂಜಿನಿಯರ್ ಗಳು, ಬಿ.ಎಫ್.ಟಿ ಗಳು, ಪಂಚಾಯಿತಿ ಇತರೆ ಸಿಬ್ಬಂದಿ ಸೇರಿ ಗ್ರಾಮಸ್ಥರು ಉಪಸ್ಥಿತರಿದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…