ಮೈಸೂರು

ಅಮೃತ ಸರೋವರ ಕೆರೆ ದಂಡೆಯಲಿ ಸ್ವಾತಂತ್ರೋತ್ಸವ

ಮೈಸೂರು : ದಕ್ಷಿಣಕಾಶಿ ನಂಜನಗೂಡು ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಅನುಷ್ಟಾನಿಸಿರುವ ಅಮೃತ ಸರೋವರ ಕೆರೆಗಳ ದಂಡೆಯಲಿ ಧ್ವಜಾರೋಹಣ ನೆರವೇರಿಸುವ ಮೂಲಕ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ.

ಬಿಳಿಗೆರೆ ಗ್ರಾಮ ಪಂಚಾಯಿತಿಯ ಕಾಮಹಳ್ಳಿ ಕೆರೆ , ಮಲ್ಲೂಪುರ ಗ್ರಾಮ ಪಂಚಾಯಿತಿಯ ಸೋನಹಳ್ಳಿ ಕೆರೆ, ಕೋಣನೂರು ಗ್ರಾಮ ಪಂಚಾಯಿತಿಯ ಪಿ.ಮರಹಳ್ಳಿ ಒಟ್ಟರಕಟ್ಟೆ ಹಾಗೂ ಶಿರಮಳ್ಳಿ ಗ್ರಾಮ ಪಂಚಾಯಿತಿಯ ಹುಸ್ಕೂರು ಚಿಕ್ಕ ಕೆರೆ ದಂಡೆಯಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಧ್ವಜಾರೋಹಣ ನೆರವೇರಿಸಿದರು.

ಮಲ್ಲೂಪುರ ಗ್ರಾಮ ಪಂಚಾಯಿತಿಯ ಸೋ‌ನಹಳ್ಳಿ ಅಮೃತ ಸರೋವರ ಕೆರೆ ದಂಡೆಯಲಿ ಧ್ಜಜಾರೋಹಣ ನೆರವೇರಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೋಮಲ ಅವರು ಮಾತನಾಡಿದರು. ಸರ್ಕಾರದ ಪ್ರತಿಷ್ಟಿತ ಯೋಜನೆಗಳಲ್ಲಿ ಒಂದಾದ ನರೇಗಾ ಯೋಜನೆ ಅಡಿ ಗ್ರಾಮದಲ್ಲಿ ಅಮೃತ ಸರೋವರ ಕೆರೆ ಅನುಷ್ಟಾನಗೊಂಡಿರುವುದು ಜನ-ಜಾನುವಾರುಗಳಿಗೆ ಅನುಕೂಲಕರವಾಗಲಿದೆ. ಜೊತೆಗೆ ಈ ಭಾಗದ ರೈತರಿಗೂ ಅನುಕೂಲವಾಗಲಿದ್ದು, ಸುತ್ತಮುತ್ತಲಿನ ಜಮೀನುಗಳು ಸಮೃದ್ಧಗೊಳ್ಳಲು ನೆರವಾಗಲಿದೆ. ಇಂತಹ ಕೆರೆ ದಂಡೆಯಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿರುವುದು ಹೆಮ್ಮೆಯ ವಿಷಯವಾಗಿದೆ‌. ನರೇಗಾ ಯೋಜನೆ ಅಡಿ ಇನ್ನಷ್ಟು ಕೆರೆ-ಕಟ್ಟೆಗಳು ಅಭಿವೃದ್ಧಿಗೊಳ್ಳಲಿ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಶಾಲಾ ಶಿಕ್ಷರು, ಐ.ಇ.ಸಿ‌ ಸಂಯೋಜಕರು, ತಾಂತ್ರಿಕ ಸಹಾಯಕ ಇಂಜಿನಿಯರ್ ಗಳು, ಬಿ.ಎಫ್.ಟಿ ಗಳು, ಪಂಚಾಯಿತಿ ಇತರೆ ಸಿಬ್ಬಂದಿ ಸೇರಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

6 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

8 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

11 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

15 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

18 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

18 hours ago