ಮೈಸೂರು

ಅಮೃತ ಸರೋವರ ಕೆರೆ ದಂಡೆಯಲಿ ಸ್ವಾತಂತ್ರೋತ್ಸವ

ಮೈಸೂರು : ದಕ್ಷಿಣಕಾಶಿ ನಂಜನಗೂಡು ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಅನುಷ್ಟಾನಿಸಿರುವ ಅಮೃತ ಸರೋವರ ಕೆರೆಗಳ ದಂಡೆಯಲಿ ಧ್ವಜಾರೋಹಣ ನೆರವೇರಿಸುವ ಮೂಲಕ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ.

ಬಿಳಿಗೆರೆ ಗ್ರಾಮ ಪಂಚಾಯಿತಿಯ ಕಾಮಹಳ್ಳಿ ಕೆರೆ , ಮಲ್ಲೂಪುರ ಗ್ರಾಮ ಪಂಚಾಯಿತಿಯ ಸೋನಹಳ್ಳಿ ಕೆರೆ, ಕೋಣನೂರು ಗ್ರಾಮ ಪಂಚಾಯಿತಿಯ ಪಿ.ಮರಹಳ್ಳಿ ಒಟ್ಟರಕಟ್ಟೆ ಹಾಗೂ ಶಿರಮಳ್ಳಿ ಗ್ರಾಮ ಪಂಚಾಯಿತಿಯ ಹುಸ್ಕೂರು ಚಿಕ್ಕ ಕೆರೆ ದಂಡೆಯಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಧ್ವಜಾರೋಹಣ ನೆರವೇರಿಸಿದರು.

ಮಲ್ಲೂಪುರ ಗ್ರಾಮ ಪಂಚಾಯಿತಿಯ ಸೋ‌ನಹಳ್ಳಿ ಅಮೃತ ಸರೋವರ ಕೆರೆ ದಂಡೆಯಲಿ ಧ್ಜಜಾರೋಹಣ ನೆರವೇರಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೋಮಲ ಅವರು ಮಾತನಾಡಿದರು. ಸರ್ಕಾರದ ಪ್ರತಿಷ್ಟಿತ ಯೋಜನೆಗಳಲ್ಲಿ ಒಂದಾದ ನರೇಗಾ ಯೋಜನೆ ಅಡಿ ಗ್ರಾಮದಲ್ಲಿ ಅಮೃತ ಸರೋವರ ಕೆರೆ ಅನುಷ್ಟಾನಗೊಂಡಿರುವುದು ಜನ-ಜಾನುವಾರುಗಳಿಗೆ ಅನುಕೂಲಕರವಾಗಲಿದೆ. ಜೊತೆಗೆ ಈ ಭಾಗದ ರೈತರಿಗೂ ಅನುಕೂಲವಾಗಲಿದ್ದು, ಸುತ್ತಮುತ್ತಲಿನ ಜಮೀನುಗಳು ಸಮೃದ್ಧಗೊಳ್ಳಲು ನೆರವಾಗಲಿದೆ. ಇಂತಹ ಕೆರೆ ದಂಡೆಯಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿರುವುದು ಹೆಮ್ಮೆಯ ವಿಷಯವಾಗಿದೆ‌. ನರೇಗಾ ಯೋಜನೆ ಅಡಿ ಇನ್ನಷ್ಟು ಕೆರೆ-ಕಟ್ಟೆಗಳು ಅಭಿವೃದ್ಧಿಗೊಳ್ಳಲಿ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಶಾಲಾ ಶಿಕ್ಷರು, ಐ.ಇ.ಸಿ‌ ಸಂಯೋಜಕರು, ತಾಂತ್ರಿಕ ಸಹಾಯಕ ಇಂಜಿನಿಯರ್ ಗಳು, ಬಿ.ಎಫ್.ಟಿ ಗಳು, ಪಂಚಾಯಿತಿ ಇತರೆ ಸಿಬ್ಬಂದಿ ಸೇರಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

17 hours ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

17 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

1 day ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

1 day ago