ಮೈಸೂರು: ವಿಧಾನಸಭೆಯ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಆರು ತಿಂಗಳಲ್ಲ, ಎರಡು ವರ್ಷ ಅಮಾನತು ಮಾಡಬೇಕಿತ್ತು ಎಂದು ಶಾಸಕ ಅನಿಲ್ ಚಿಕ್ಕಮಾದು ಸಮರ್ಥನೆ ಮಾಡಿಕೊಂಡಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಅಂದು ಬಿಜೆಪಿಯ ಶಾಸಕರು ಸಭಾಧ್ಯಕ್ಷ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ಅಲ್ಲದೇ ಅಸಂವಿಧಾನಿಕವಾಗಿ ನಡೆದುಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ. ಹೀಗಾಗಿ ಆ 18 ಶಾಸಕರನ್ನು ಆರು ತಿಂಗಳ ಅಲ್ಲ, ಕನಿಷ್ಟ ಎರಡು ವರ್ಷಗಳ ಕಾಲ ಅಮಾನತು ಮಾಡಬೇಕಿತ್ತು ಎಂದು ಹೇಳಿದರು.
ಬಿಜೆಪಿ ಶಾಸಕರು ನಡೆದುಕೊಂಡ ರೀತಿ ಬಹಳ ಖಂಡನೀಯವಾಗಿದ್ದು, ನಮಗಂತು ತುಂಬಾ ಬೇಸರವನ್ನು ಉಂಟು ಮಾಡಿದೆ. ಸದನದಲ್ಲಿ ಬಿಜೆಪಿ ಶಾಸಕರ ನಡೆ ಪ್ರಜಾಪ್ರಭುತ್ವದ ವಿರೋಧಿ ನಡೆ ಎಂದರು.
ಇದೇ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ವಿಚಾರ ಮಾತನಾಡಲು ನಾನು ಚಿಕ್ಕವನು. ಈಗಾಗಲೇ ಸರ್ಕಾರ ಉನ್ನತಮಟ್ಟದ ತನಿಖೆ ನಡೆಸಲು ನಿರ್ಧಾರ ಮಾಡಿದೆ. ಯಾರೇ ಆಗಲಿ ಇಂತಹ ವಿಚಾರದ ಬಗ್ಗೆ ಜಾಗೃತಕತೆಯಿಂದ ಇರಬೇಕು ಎಂದು ತಿಳಿಸಿದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…