ಮೈಸೂರು: ವಿಧಾನಸಭೆಯ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಆರು ತಿಂಗಳಲ್ಲ, ಎರಡು ವರ್ಷ ಅಮಾನತು ಮಾಡಬೇಕಿತ್ತು ಎಂದು ಶಾಸಕ ಅನಿಲ್ ಚಿಕ್ಕಮಾದು ಸಮರ್ಥನೆ ಮಾಡಿಕೊಂಡಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಅಂದು ಬಿಜೆಪಿಯ ಶಾಸಕರು ಸಭಾಧ್ಯಕ್ಷ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ಅಲ್ಲದೇ ಅಸಂವಿಧಾನಿಕವಾಗಿ ನಡೆದುಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ. ಹೀಗಾಗಿ ಆ 18 ಶಾಸಕರನ್ನು ಆರು ತಿಂಗಳ ಅಲ್ಲ, ಕನಿಷ್ಟ ಎರಡು ವರ್ಷಗಳ ಕಾಲ ಅಮಾನತು ಮಾಡಬೇಕಿತ್ತು ಎಂದು ಹೇಳಿದರು.
ಬಿಜೆಪಿ ಶಾಸಕರು ನಡೆದುಕೊಂಡ ರೀತಿ ಬಹಳ ಖಂಡನೀಯವಾಗಿದ್ದು, ನಮಗಂತು ತುಂಬಾ ಬೇಸರವನ್ನು ಉಂಟು ಮಾಡಿದೆ. ಸದನದಲ್ಲಿ ಬಿಜೆಪಿ ಶಾಸಕರ ನಡೆ ಪ್ರಜಾಪ್ರಭುತ್ವದ ವಿರೋಧಿ ನಡೆ ಎಂದರು.
ಇದೇ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ವಿಚಾರ ಮಾತನಾಡಲು ನಾನು ಚಿಕ್ಕವನು. ಈಗಾಗಲೇ ಸರ್ಕಾರ ಉನ್ನತಮಟ್ಟದ ತನಿಖೆ ನಡೆಸಲು ನಿರ್ಧಾರ ಮಾಡಿದೆ. ಯಾರೇ ಆಗಲಿ ಇಂತಹ ವಿಚಾರದ ಬಗ್ಗೆ ಜಾಗೃತಕತೆಯಿಂದ ಇರಬೇಕು ಎಂದು ತಿಳಿಸಿದರು.
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…