ಮೈಸೂರು: ವಿಧಾನಸಭೆಯ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಆರು ತಿಂಗಳಲ್ಲ, ಎರಡು ವರ್ಷ ಅಮಾನತು ಮಾಡಬೇಕಿತ್ತು ಎಂದು ಶಾಸಕ ಅನಿಲ್ ಚಿಕ್ಕಮಾದು ಸಮರ್ಥನೆ ಮಾಡಿಕೊಂಡಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಅಂದು ಬಿಜೆಪಿಯ ಶಾಸಕರು ಸಭಾಧ್ಯಕ್ಷ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ಅಲ್ಲದೇ ಅಸಂವಿಧಾನಿಕವಾಗಿ ನಡೆದುಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ. ಹೀಗಾಗಿ ಆ 18 ಶಾಸಕರನ್ನು ಆರು ತಿಂಗಳ ಅಲ್ಲ, ಕನಿಷ್ಟ ಎರಡು ವರ್ಷಗಳ ಕಾಲ ಅಮಾನತು ಮಾಡಬೇಕಿತ್ತು ಎಂದು ಹೇಳಿದರು.
ಬಿಜೆಪಿ ಶಾಸಕರು ನಡೆದುಕೊಂಡ ರೀತಿ ಬಹಳ ಖಂಡನೀಯವಾಗಿದ್ದು, ನಮಗಂತು ತುಂಬಾ ಬೇಸರವನ್ನು ಉಂಟು ಮಾಡಿದೆ. ಸದನದಲ್ಲಿ ಬಿಜೆಪಿ ಶಾಸಕರ ನಡೆ ಪ್ರಜಾಪ್ರಭುತ್ವದ ವಿರೋಧಿ ನಡೆ ಎಂದರು.
ಇದೇ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ವಿಚಾರ ಮಾತನಾಡಲು ನಾನು ಚಿಕ್ಕವನು. ಈಗಾಗಲೇ ಸರ್ಕಾರ ಉನ್ನತಮಟ್ಟದ ತನಿಖೆ ನಡೆಸಲು ನಿರ್ಧಾರ ಮಾಡಿದೆ. ಯಾರೇ ಆಗಲಿ ಇಂತಹ ವಿಚಾರದ ಬಗ್ಗೆ ಜಾಗೃತಕತೆಯಿಂದ ಇರಬೇಕು ಎಂದು ತಿಳಿಸಿದರು.
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…