ಮೈಸೂರು

ಬಿಜೆಪಿಯ 18 ಶಾಸಕ ಅಮಾನತು| 6 ತಿಂಗಳಲ್ಲ, 2 ವರ್ಷ ಅಮಾನತು ಮಾಡಬೇಕಿತ್ತು: ಅನಿಲ್‌ ಚಿಕ್ಕಮಾದು

ಮೈಸೂರು: ವಿಧಾನಸಭೆಯ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಆರು ತಿಂಗಳಲ್ಲ, ಎರಡು ವರ್ಷ ಅಮಾನತು ಮಾಡಬೇಕಿತ್ತು ಎಂದು ಶಾಸಕ ಅನಿಲ್‌ ಚಿಕ್ಕಮಾದು ಸಮರ್ಥನೆ ಮಾಡಿಕೊಂಡಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್‌.24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಅಂದು ಬಿಜೆಪಿಯ ಶಾಸಕರು ಸಭಾಧ್ಯಕ್ಷ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ಅಲ್ಲದೇ ಅಸಂವಿಧಾನಿಕವಾಗಿ ನಡೆದುಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ. ಹೀಗಾಗಿ ಆ 18 ಶಾಸಕರನ್ನು ಆರು ತಿಂಗಳ ಅಲ್ಲ, ಕನಿಷ್ಟ ಎರಡು ವರ್ಷಗಳ ಕಾಲ ಅಮಾನತು ಮಾಡಬೇಕಿತ್ತು ಎಂದು ಹೇಳಿದರು.

ಬಿಜೆಪಿ ಶಾಸಕರು ನಡೆದುಕೊಂಡ ರೀತಿ ಬಹಳ ಖಂಡನೀಯವಾಗಿದ್ದು, ನಮಗಂತು ತುಂಬಾ ಬೇಸರವನ್ನು ಉಂಟು ಮಾಡಿದೆ. ಸದನದಲ್ಲಿ ಬಿಜೆಪಿ ಶಾಸಕರ ನಡೆ ಪ್ರಜಾಪ್ರಭುತ್ವದ ವಿರೋಧಿ ನಡೆ ಎಂದರು.

ಇದೇ ಸಂದರ್ಭದಲ್ಲಿ ಹನಿಟ್ರ್ಯಾಪ್‌ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ವಿಚಾರ ಮಾತನಾಡಲು ನಾನು ಚಿಕ್ಕವನು. ಈಗಾಗಲೇ ಸರ್ಕಾರ ಉನ್ನತಮಟ್ಟದ ತನಿಖೆ ನಡೆಸಲು ನಿರ್ಧಾರ ಮಾಡಿದೆ. ಯಾರೇ ಆಗಲಿ ಇಂತಹ ವಿಚಾರದ ಬಗ್ಗೆ ಜಾಗೃತಕತೆಯಿಂದ ಇರಬೇಕು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

8 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

9 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

9 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

10 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

14 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

17 hours ago